ರಾಮನಗರ, ಏಪ್ರಿಲ್ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್ಎನ್ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು.
ನಡೆದದ್ದೇನು?
2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿ ಬಾರ್ ಬಳಿ ಭೀಕರ ಕೊಲೆ ನಡೆದಿತ್ತು. ತಮಿಳುನಾಡು ಮೂಲದ ಶಂಕರ ಎಂಬಾತನನ್ನ ಬಾರ್ ಮುಂದೆ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಜಮೀನು ವಿಚಾರವಾಗಿ ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.
Laxmi News 24×7