Breaking News

ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಮುಖ್ಯಮಂತ್ರಿಗಳೇ

Spread the love

ಯಾದಗಿರಿ: ನಮ್ಮ ಕೈ ಬಿಡಬೇಡಿ ಮುಖ್ಯಮಂತ್ರಿಗಳೇ, ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಅಂತ ಯಾದಗಿರಿ ಜಿಲ್ಲೆಯ ರೈತರೊಬ್ಬರು ತನ್ನ ಅಳಲನ್ನು ತೊಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಸೇರಿದಂತೆ ತಗ್ಗು ಪ್ರದೇಶದ ಮನೆಗಳಿ ಮಳೆ ನುಗ್ಗುತ್ತಿವೆ. ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತಿದ ಬೆಳೆ ನಾಶವಾಗಿದೆ. ಇದರಿಂದ ಕಂಗಾಲಾಗಿರುವ ಜಿಲ್ಲೆಯ ಶಹಪುರ ತಾಲೂಕಿನ ಕನ್ಯಾಕೊಳ್ಳೂರಿನ ರೈತ ಭೀಮರಾಯಪ್ಪ ತನ್ನ ಹೊಲದ ಪರಿಸ್ಥಿತಿ ವಿವರಿಸಿ ಕೈಮುಗಿದು, ವೀಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

 

ಭೀಮರಾಯಪ್ಪ ತನ್ನ 5 ಎಕರೆಯಲ್ಲಿ ಲಕ್ಷಾಂತರ ರೂಪಾಯ ಖರ್ಚು ಮಾಡಿ ಹತ್ತಿ ಬಿತ್ತಿದ್ದರು. ಆದರೆ ಮಳೆಯ ಪ್ರಮಾಣ ಜಾಸ್ತಿಯಾಗಿ ಹಳ್ಳ ತುಂಬಿದ ಹಿನ್ನೆಲೆಯಲ್ಲಿ ಸಾಗರದಂತೆ ಜಮೀನಿಗೆ ನೀರು ನುಗ್ಗಿವೆ. ಇದರಿಂದ ಹತ್ತಿ ಬಿತ್ತನೆ ಮಾಡಿದ ಹೊಲವೆಲ್ಲಾ ಕೊಚ್ಚಿಕೊಂಡು ಹೋಗಿ ಹತ್ತಿ ನೀರುಪಾಲಾಗಿದೆ. ಇದರಿಂದ ಕಂಗಾಲಾಗಿರುವ ರೈತ ಭೀಮರಾಯಪ್ಪ ತನ್ನ ಅಳಲನ್ನು ವೀಡಿಯೋ ಮೂಲಕ ತೊಡಿಕೊಂಡಿದ್ದಾನೆ.


Spread the love

About Laxminews 24x7

Check Also

ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ

Spread the loveಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ