Breaking News

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬ್ಯಾಂಕ್​​​ ಜನಾರ್ಧನ್​​ ​ಇನ್ನಿಲ್ಲ

Spread the love

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್​​​ ಜನಾರ್ಧನ್​​​ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚಂದನವನದ ಖ್ಯಾತ ಹಾಸ್ಯನಟನ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ. ​​

ಸಂಜೆ ಅಂತ್ಯಕ್ರಿಯೆ: ಬಹುದಿನಗಳಿಂದ ವಯೋಸಹಜ ಕಾಯಿಲೆ ವಿರುದ್ಧ ಹೋರಾಡುತ್ತಿದ್ದ ಜನಪ್ರಿಯ ನಟ ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಗಳು ಸೂಚಿಸಿವೆ.

ಕಿರುತೆರೆ to ಹಿರಿತೆರೆ: 80-90ರ ದಶಕದ ಸಂದರ್ಭ ಬೇಡಿಕೆ ಹೊಂದಿದ್ದ ಇವರು ಶ್, ತರ್ಲೆ ನನ್ಮಗ, ನ್ಯೂಸ್​ನಂತಹ ಹಿಟ್​ ಚಿತ್ರಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪಾಪ ಪಾಂಡು, ಮಾಂಗಲ್ಯ, ಜೋಕಾಲಿ, ರೋಬೋ ಫ್ಯಾಮಿಲಿಯಂತಹ ಸಾಲು ಸಾಲು ಸೀರಿಯಲ್​​ಗಳಲ್ಲಿಯೂ ಬಣ್ಣ ಹಚ್ಚಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ್ದಾರೆ.1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದ ಬ್ಯಾಂಕ್​​ ಜನಾರ್ಧನ್​​​, ಕಾಮಿಡಿ ರೋಲ್​ಗಳ ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು. ನೂರಾರು ಚಿತ್ರಗಳಲ್ಲಿನ ಅಭಿನಯ ಇವರಿಗೆ ವಿಭಿನ್ನ ಜನಪ್ರಿಯತೆ ತಂದುಕೊಟ್ಟಿತ್ತು. ಗಣೇಶ ಸುಬ್ರಮಣ್ಯ, ಪೊಲೀಸನ ಹೆಂಡತಿ, ಚೆಲುವ, ದೇವ, ರಂಬೆ ಊರ್ವಶಿ ಮೇನಕೆ, ಮಿಸ್ಟರ್ ಬಕ್ರ, ರಕ್ತ ಕಣ್ಣೀರು, ರಂಗ ಎಸ್​ಎಸ್​ಎಲ್​ಸಿ, ಇತ್ತೀಚಿನ ವರ್ಷಗಳಲ್ಲಿ ಪವರ್​​, ಕೋಟಿಗೊಬ್ಬ 2 ಸೇರಿ ನೂರಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ