ಬೆಂಗಳೂರು, ಏಪ್ರಿಲ್ 14: ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎನ್.ರಾಜಣ್ಣ (K. N. Rajanna) ವಿರುದ್ಧ ನಗರದ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವವರಿಂದು ದೂರು ನೀಡಲಾಗಿದೆ. ಪ್ರಮಾಣವಚನ ಸ್ವೀಕಾರ ವೇಳೆ ಗೌಪ್ಯತೆ ಕಾಪಾಡುತ್ತೇನೆ ಅಂದಿದ್ದರು. ಆದರೆ ಸಚಿವರಾಗಿ ಸದನದಲ್ಲಿ ಹನಿಟ್ರ್ಯಾಪ್ (Honeytrap) ವಿಚಾರ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಚಿವ ರಾಜಣ್ಣ ನಮ್ಮ ಬಳಿ ಸಿಡಿ ಇದೆ ಅಂತ ಹೇಳಿದ್ದಾರೆ. ಹಾಗಾಗಿ ಪೊಲೀಸರು ಅವರನ್ನು ಕೊಡಲೇ ವಶಕ್ಕೆ ಪಡೆದು CD ಎಲ್ಲಿದೆ ಅಂತ ಪತ್ತೆಹಚ್ಚಬೇಕು. 48 ಗಂಟೆಯಲ್ಲಿ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಡುತ್ತೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಧಿಕಾರಿಗಳ ಕಾಲಿಗೆ ಬೀಳುತ್ತೇನೆ, ಹಣ ವಸೂಲಿ ಮಾಡುವುದನ್ನು ನಿಲ್ಲಿಸಿ ಎಂದ ಶಾಸಕ ಕೆಎಸ್ ಬಸವಂತಪ್ಪ
ಪೌರ ಕಾರ್ಮಿಕರ ಖಾಯಮಾತಿಗೆ ಪುರಸಭೆ, ನಗರಸಭೆ, ನಗರಪಾಲಿಕೆ ಅಧಿಕಾರಿಗಳು ಲಕ್ಷಾಂತರ ರೂ. ಲಂಚ ಪಡೀತಿದ್ದಾರೆ ಎಂದು ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಆರೋಪ ಮಾಡದ್ದಾರೆ. ದಾವಣಗೆರೆ ನಗರ ಪಾಲಿಕೆಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಖಾಯಮಾತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಅಧಿಕಾರಿಗಳು ಪೌರಕಾರ್ಮಿಕರಿಂದ 2, 3, 4 ಲಕ್ಷ ರೂ ಲಂಚ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಸಚಿವ ರಾಜಣ್ಣ ನಮ್ಮ ಬಳಿ ಸಿಡಿ ಇದೆ ಅಂತ ಹೇಳಿದ್ದಾರೆ. ಹಾಗಾಗಿ ಪೊಲೀಸರು ಅವರನ್ನು ಕೊಡಲೇ ವಶಕ್ಕೆ ಪಡೆದು CD ಎಲ್ಲಿದೆ ಅಂತ ಪತ್ತೆಹಚ್ಚಬೇಕು. 48 ಗಂಟೆಯಲ್ಲಿ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಡುತ್ತೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಧಿಕಾರಿಗಳ ಕಾಲಿಗೆ ಬೀಳುತ್ತೇನೆ, ಹಣ ವಸೂಲಿ ಮಾಡುವುದನ್ನು ನಿಲ್ಲಿಸಿ ಎಂದ ಶಾಸಕ ಕೆಎಸ್ ಬಸವಂತಪ್ಪ
ಪೌರ ಕಾರ್ಮಿಕರ ಖಾಯಮಾತಿಗೆ ಪುರಸಭೆ, ನಗರಸಭೆ, ನಗರಪಾಲಿಕೆ ಅಧಿಕಾರಿಗಳು ಲಕ್ಷಾಂತರ ರೂ. ಲಂಚ ಪಡೀತಿದ್ದಾರೆ ಎಂದು ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಆರೋಪ ಮಾಡದ್ದಾರೆ. ದಾವಣಗೆರೆ ನಗರ ಪಾಲಿಕೆಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಖಾಯಮಾತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಅಧಿಕಾರಿಗಳು ಪೌರಕಾರ್ಮಿಕರಿಂದ 2, 3, 4 ಲಕ್ಷ ರೂ ಲಂಚ ಪಡೆಯುತ್ತಿದ್ದಾರೆ ಎಂದಿದ್ದಾರೆ.
Laxmi News 24×7