Breaking News

ವಿಮಾನಕ್ಕೆ ಗುದ್ದಿದ ಟಿಟಿ ವಾಹನ

Spread the love

ದೇವನಹಳ್ಳಿ, ಏಪ್ರಿಲ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda Airport) ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್​ಪೋರ್ಟ್​ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಘಟನೆ ಬಗ್ಗೆ ಕೆಂಪೇಗೌಡ ಏರ್​​ಪೋರ್ಟ್​ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಏ.18ರ ಮಧ್ಯಾಹ್ನ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಂಟ್ರ್ಯಾಕ್ಟ್ ಏಜೆನ್ಸಿ ಕಡೆಯ ಚಾಲಕ ಟಿಟಿ ವಾಹನವನ್ನು ಚಲಾಯಿಸಿಕೊಂಡು ಕೆಟ್ಟು ನಿಂತಿದ್ದ ವಿಮಾನದ ಬಳಿ ಬಂದಿದ್ದು, ಫ್ಲೈಟ್​​ಗೆ ಟಿಟಿ ವಾಹನದ ಮೇಲ್ಭಾಗ ತಗುಲಿ ಡ್ಯಾಮೇಜ್ ಆಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ತಕ್ಷಣ ನಮ್ಮ ಸಿಬ್ಬಂದಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಕುರಿತು ಈಗಾಗಲೇ ಡಿಜಿಸಿಎಗೆ ಮಾಹಿತಿ ರವಾನಿಸಿದ್ದೇವೆ. ಪ್ರಯಾಣಿಕರಿಗೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆಯಾಗಿಲ್ಲ. ಪ್ರಯಾಣಿಕರು, ಸಿಬ್ಬಂದಿ, ಏರ್​​​​ಲೈನ್ಸ್​​ನ ಸುರಕ್ಷತೆ ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ರೀತಿ ಕಳೆದ ವರ್ಷ ಟರ್ಮಿನಲ್ 2 ರಿಂದ 1 ಕ್ಕೆ ಬರುತ್ತಿದ್ದ ಶೆಟಲ್ ಬಸ್ ಸಹ ಅಪಘಾತಕ್ಕೆ ಒಳಾಗಾಗಿ 10 ಜನ ಪ್ರಯಾಣಿಕರು ಗಾಯಗೊಂಡಿದ್ದರು. ಏರ್​ಪೋರ್ಟ್​ನಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿದ್ದು, ಏರ್​ಪೋರ್ಟ್​ ಸಿಬ್ಬಂದಿಗೆ ಅಧಿಕ ಒತ್ತಡ ಹಾಗೂ ಒಟಿಗಳನ್ನ ಹೆಚ್ಚಾಗಿ ಮಾಡಿಸುವ ಕಾರಣ ಈ ರೀತಿ ಅಪಘಾತಗಳು ಸಂಭವಿಸುತ್ತಿವೆ ಎಂದು ಏರ್​ಪೋರ್ಟ್​ ಸಿಬ್ಬಂದಿಗಳು ಸಹ ಪರೋಕ್ಷವಾಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ