ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಚಾಕುವಿನಿಂದ 8-10 ಬಾರಿ ಇರಿದು ಕೊಲೆ
ಪ್ರಾಥಮಿಕ ತನಿಖೆ ವೇಳೆ, ಪತಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರು 8 ರಿಂದ10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ಓಂ ಪ್ರಕಾಶ್ ಅವರ ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇನ್ನು, ಹೊಟ್ಟೆ ಭಾಗಕ್ಕೆ ಸುಮಾರು 4-5 ಬಾರಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಮನೆಯ ಪಡಸಾಲೆ ತುಂಬ ರಕ್ತ ಹರಿದಿದೆ. ಓಂ ಪ್ರಕಾಶ್ ಅವರು ಸುಮಾರು 15-20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಪತಿಯ ನರಳಾಟವನ್ನು ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ದರು ಎಂಬ ಮಾಹಿತಿ ದೊರೆತಿದೆ. ನಂತರ, ಪತ್ನಿ ಪಲ್ಲವಿಯವರು ಹೆಚ್ಎಸ್ಆರ್ ಲೇಔಟ್ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
‘I have Finished monster’ ಅಂತ ಕರೆ ಮಾಡಿದ್ದ ಪಲ್ಲವಿ
ಇನ್ನು, ಪತಿ ಓಂ ಪ್ರಕಾಶ್ ಮೃತಪಟ್ಟ ಬಳಿಕ, ಪತ್ನಿ ಪಲ್ಲವಿಯವರು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, ‘I have Finished monster’ ಅಂತ ಎಂದಿದ್ದರಂತೆ.
Laxmi News 24×7