Breaking News

ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಚಾಲಕನ ಸಮಯ ಪ್ರಜ್ಞೆ ಹಾಗೂ ಐಡಿಯಾಕ್ಕೆ ಪ್ರಯಾಣಿಕರು ಕೃತಜ್ಞತೆ

Spread the love

ಚಾಮರಾಜನಗರ, (ಏಪ್ರಿಲ್ 27): ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್​​​ ಬಸ್​​ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್​ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್​ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ.

KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಮಲೆ ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆಗ್ತಿದ್ದಂತೆ ಬಸ್​ಅನ್ನು ಡಿವೈಡರ್ ಮೇಲೆ ಏರಿಸಿದ್ದಾನೆ.

ಆಗ ಬಸ್ ನಿಂತುಕೊಂಡಿದೆ. ಒಂದು ವೇಳೆ ಚಾಲಕ ಬಸ್​ ಅನ್ನು ಡಿವೈಡರ್​ಗೆ ಹತ್ತಿಸದಿದ್ದರೆ ಏನು ಅನಾಹುತ ಆಗುತ್ತಿತ್ತು. ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಐಡಿಯಾಕ್ಕೆ ಪ್ರಯಾಣಿಕರು ಕೃತಜ್ಞತೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ