Breaking News

ರಾಜ್ಯದಲ್ಲಿ ಎಲ್ಲಿಯೂ ಕಾರ್ಯಕ್ರಮ ಮಾಡಲು ಬಿಡಲ್ಲ : ಬಿಜೆಪಿ ನಾಯಕರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಎಚ್ಚರಿಕೆ

Spread the love

ಬೆಳಗಾವಿ : ನಿಮ್ಮ ಪಕ್ಷದ ಕಾರ್ಯಕರ್ತರಿಗೆ ನೀವೇ ಬುದ್ಧಿವಾದ ಹೇಳಿ, ಸರಿಪಡಿಸಬೇಕು. ಇಲ್ಲದಿದ್ದರೆ ನೀವು ಎಲ್ಲಿಯೂ ಕಾರ್ಯಕ್ರಮ ಮಾಡಲು ನಾನು ಬಿಡುವುದಿಲ್ಲ. ಎಲ್ಲ ರೀತಿಯ ಪ್ರತಿಹೋರಾಟಕ್ಕೆ ನಾವೂ ಸಿದ್ಧರಿದ್ದೇವೆ. ನಾನು ಮನವಿ ಮಾಡಿಕೊಳ್ಳುತ್ತಿಲ್ಲ. ಇದು ನಿಮಗೆ ಎಚ್ಚರಿಕೆ ಗಂಟೆ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸವಾಲು ಹಾಕಿದರು.

ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಗಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೇ ಮೊದಲ ಬಾರಿ ಬಿಜೆಪಿಯವರು ನಾಲ್ಕು ಕಾರ್ಯಕರ್ತರನ್ನು ಕಳುಹಿಸಿ ಕೊಟ್ಟಿದ್ದಾರೆ. ನಮ್ಮ ಪ್ರತಿಭಟನೆ ಕಾರ್ಡ್ ಇಟ್ಟುಕೊಂಡು ಕಪ್ಪು ಬಾವುಟ ಪ್ರದರ್ಶಿಸಿ, ಕೂಗಾಟ ಮಾಡಿ ಗದ್ದಲ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಇದು ಸರಿಯಲ್ಲ. ಈ ಪ್ರವೃತ್ತಿ ಮುಂದುವರಿಸಿದರೆ ಇಡೀ ರಾಜ್ಯದಲ್ಲಿ ಒಂದು ಸಭೆಯನ್ನೂ ಮಾಡಲು ಬಿಡುವುದಿಲ್ಲ.‌ ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆಯಾಗಿದೆ ಎಂದು ಎಚ್ಚರಿಸಿದರು.

ಈ ವರ್ತನೆ ನೀವು ನೆಟ್ಟಗೆ ಮಾಡಿಕೊಂಡರೆ ಸರಿ. ಇದೇ ರೀತಿ ದುರ್ವರ್ತನೆ ಮುಂದುವರಿಸಿದರೆ ನಿಮ್ಮ ವಿರುದ್ಧ ನಿಮಗಿಂತ ಜಾಸ್ತಿ ಹೋರಾಟ ಕಾರ್ಯರೂಪಕ್ಕೆ ತರುವ ಶಕ್ತಿಯನ್ನು ಭಗವಂತ ಮತ್ತು ರಾಜ್ಯದ ಜನತೆ ನನಗೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಜನರ ಬದುಕು ಸುಧಾರಿಸುತ್ತಿದ್ದೇವೆ : ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯವರ ಬಳಿ ಹೋಗಿ, ನಿಮ್ಮಿಂದ ಬೆಲೆ ಏರಿಕೆ ಆಗಿದೆ, ಇದಕ್ಕೆ ನೀವು ಮೊದಲು ಉತ್ತರ ಕೊಡಿ ಅಂತಾ ಕೇಳಿ ಎಂದು ಕರೆ ನೀಡಿದ ಅವರು, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಅನುಕೂಲ ಆಗಲಿ ಅಂತ ನಾವು 52 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಜನರ ಬದುಕು ಸುಧಾರಿಸುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ