Breaking News

ಶಾಸಕರಿಗೆಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿ ಗೌರವಿಸಿದ್ದಾರೆ.

Spread the love

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿವ ಮೂಲಕ ಅಂಧಾಭಿಮಾನ ಮೆರೆದಿದ್ದಾರೆ.

ಚಾಮರಾಜಪೇಟೆಯಲ್ಲಿ ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಬಳಗದಿಂದ ಕಾರ್ಯಕ್ರಮ ಆಯೋಜಿಸಿ, ಪಾದಪೂಜೆ ಮಾಡಿ ಗೌರವಿಸಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಮರೆತು ಒಟ್ಟೊಟ್ಟಾಗಿ ನಿಂತು ಪಾದಪೂಜೆ ಮಾಡಿದ್ದಾರೆ. ಅಲ್ಲದೆ ಬಂಗಾರದ ಮನುಷ್ಯ ಜಮೀರಣ್ಣ ಎಂಬ ಕಟೌಟ್‍ನ್ನು ಶಾಸಕ ಜಮೀರ್ ಅಹ್ಮದ್ ಕಡೆಯಿಂದಲೇ ಬಿಡುಗಡೆ ಮಾಡಿಸಿದ್ದಾರೆ. ಈ ವೇಳೆ ಕೋವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮದಲ್ಲಿ ಬೇಕಾಬಿಟ್ಟಿಯಾಗಿ ವರ್ತಿಸಿದ್ದಾರೆ.ಬೆಂಬಲಿಗರು ಸಾಮಾಜಿಕ ಅಂತರವಿಲ್ಲದೆ ಒಟ್ಟಿಗೆ ಸೇರಿ ಕಾಲು ತೊಳೆದು, ಹೂ ಹಾಕಿ ಪಾದಪೂಜೆ ಮಾಡಿ, ಬಳಿಕ ಬಟ್ಟೆಯಿಂದ ಜಮೀರ್ ಕಾಲು ವರೆಸಿದ್ದಾರೆ. ಈ ವೇಳೆ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ