ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಿದ್ದಾರೆ. ದೇಶದ ಭದ್ರತೆಯ ವಿಚಾರದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್ನವರೆಲ್ಲ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸ್ವಲ್ಪವಾದರೂ ಮರ್ಯಾದೆ ಬೇಡವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎನ್ನಲು ನೂರಾರು ಕಾರಣ ಎಂದು ರಾಜ್ಯದ ಸಚಿವರು ಹೇಳುತ್ತಾರೆ. ಇದು ದೇಶದ್ರೋಹ ಅಲ್ಲವೇ? ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ಅವರು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಹಾಲಿನಿಂದ ಆಲ್ಕೋಹಾಲ್ವರೆಗೆ ಬೆಲೆ ಏರಿಕೆಗೆ ಕಾಂಗ್ರೆಸ್ನವರ ಆಡಳಿತ ವೈಫಲ್ಯವೇ ಕಾರಣ ಎಂದ ಜೋಶಿ, ಬೆಲೆ ಏರಿಕೆ ಬಗ್ಗೆ ನಾನು ಸದನದಲ್ಲಿ ಚರ್ಚೆಗೆ ಸಿದ್ಧನೆಂದು ಹೇಳಿದರೂ ಯಾವ ಕಾಂಗ್ರೆಸ್ ಸಂಸದರೂ ಮಾತನಾಡಲಿಲ್ಲ ಎಂದು ಕುಟುಕಿದರು.
ಕಾಂಗ್ರೆಸ್ನವರ ಹೇಳಿಕೆ ಗ್ರಾಮಾಫೋನ್ ಇದ್ದಂತೆ. ಹೇಳಿದ್ದೇ ಹೇಳುವುದು ಅವರ ಕೆಲಸ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಒಳಗೊಳಗೆ ಬಡಿದಾಡಿಕೊಳ್ಳುತ್ತಾರೆ. ಹೊರಗೆ ಏನೇನೋ ಮಾತನಾಡುತ್ತಾರೆ ಎಂದರು.
Laxmi News 24×7