Breaking News

ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ

Spread the love

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ವತಿಯಿಂದ ಬೆಳಗಾವಿಯ ಅಂಗಡಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಬಿವಿಪಿ ರಾಷ್ಟೀಯ ಉಪಾಧ್ಯಕ್ಷರಾದ ಪ್ರೊ.ಮಂದಾರ ಭಾನುಷೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಶುಭಾ ಬಿ ಅವರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಪುಸ್ತಕ ಪರಿಚಯವನ್ನು ಪುಸ್ತಕದ ಅನುವಾದಕರಾದ ಶ್ರೀ ಬೇಳೂರು ಸುದರ್ಶನ ಅವರು ಮಾಡಿದರು.
ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ಕಾರ್ಯದರ್ಶಿ ಶ್ರೀ ಸಚಿನ ಕುಳಗೇರಿ ಪ್ರಾಸ್ತಾವಿಕ ನುಡಿ ಮಾತನಾಡಿದರು.
ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ಉಪಾಧ್ಯಕ್ಷರಾದ ಶ್ರೀಮತಿ ಸುಮಾ ಬೊಳರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ಉತ್ತರ ಪ್ರಾಂತ ಕಾರ್ಯವಾಹರಾದ ಶ್ರೀ ರಾಘವೇಂದ್ರ ಕಾಗವಾಡ,ಅಂಗಡಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಡಾ.ಆನಂದ ದೇಶಪಾಂಡೆ ಹಾಗೂ ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಕು ಮಧು ಮುಂಡಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ