Breaking News

ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್

Spread the love

ಬೆಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ (Pahalgam) ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು (Flights Cancelled) ಮಾಡಲಾಗಿದೆ.

ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ ಮತ್ತು ಘಾಜಿಯಾಬಾದ್​​ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ.

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಟ್ವೀಟ್​ ಮಾಡಿದ್ದು, ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ