Breaking News

ಆಪರೇಷನ್​​​​ ಸಿಂಧೂರ ಬಗ್ಗೆ ಸ್ಟೇಟಸ್: ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ

Spread the love

ಶಿವಮೊಗ್ಗ: ಭಾರತದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್​​ ಇಬ್ರಾಹಿಂ ಖಾನ್​​​ ಎಂಬಾತನ ವಿರುದ್ಧ ಕೇಸ್​ ದಾಖಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಪ್ರಕಾಶ್​ ಎಂಬವರು ಇಬ್ಬು ಅಲಿಯಾಸ್ ಇಬ್ರಾಹಿಂ ವಿರುದ್ದ ದೂರು ನೀಡಿದ್ದಾರೆ. ಭಾರತ ದೇಶದ ಪ್ರಜೆಯಾಗಿ, ದೇಶದ ರಕ್ಷಣೆ ಪಡೆದು ಪಾಕಿಸ್ತಾನದ ಪರವಾಗಿ ದೇವರಲ್ಲಿ ಬೇಡಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾನ್ಸ್​ಟೇಬಲ್ ನೀಡಿದ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ