Breaking News

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ

Spread the love

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ
ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಕೆ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎಂಬ ಬರಹದ ಪೋಸ್ಟರ್ ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಿದ ಬಿಜೆಪಿ ಮುಖಂಡರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಡಾ, ವಾಲ್ಮೀಕಿ ನಿಗಮದ ಹಗರಣಗಳೇ ಸರ್ಕಾರ ಸಾಧನೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ್ ನಡಹಳ್ಳಿ,‌ ಜಿಲ್ಲಾದ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ, ಉಮೇಶ ಕಾರಜೋಳ ಇವರು ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ