Breaking News

ಕೆಎಸ್​ಆರ್​ಟಿಸಿ ಬಸ್ ಮೇಲೆ ಮುರಿದು ಬಿದ್ದ ಮರದ ಕೊಂಬೆ

Spread the love

ಬೆಂಗಳೂರು: ದೊಡ್ಡಬಳ್ಳಾಪುರ-ಬೆಂಗಳೂರು ಮಾರ್ಗದಲ್ಲಿ ಕಾವೇರಿ ಭವನಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮೇಲೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ತಕ್ಷಣವೇ ಚಾಲಕ ಬಸ್​ ಅನ್ನು ಬಲಕ್ಕೆ ಚಲಾಯಿಸುವ ಮೂಲಕ ಪ್ರಾಣಹಾನಿ ತಪ್ಪಿಸಿದ್ದಾರೆ.

ಪ್ಯಾಲೆಸ್ ಗುಟ್ಟಹಳ್ಳಿಯ ಅರಮನೆ ಮೈದಾನದ ಮುಂಭಾಗ ಗೇಟ್ ನಂಬರ್ 7ರಲ್ಲಿ ಇಂದು ಮಧ್ಯಾಹ್ನ ಘಟನೆ ನಡೆಯಿತು. ನಿಧಾನಗತಿಯಲ್ಲಿ ಬಸ್ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯ ಮರದ ಕೊಂಬೆ ಬಸ್ ಮೇಲೆ ಬಿದ್ದಿದೆ. ಕೊಂಬೆ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ನಾಗರಾಜು, ರಸ್ತೆಯ ಬಲಕ್ಕೆ ಬಸ್ ತಿರುಗಿಸಿದ್ದಾರೆ. ಹೀಗಾಗಿ ಕೊಂಬೆ ಬಸ್​ನ ಕನ್ನಡಿ ಮೇಲೆ ಬಿದ್ದಿದೆ.

“ಒಂದು ವೇಳೆ ಮರದ ಕೊಂಬೆ ಬಸ್ ಮೇಲೆ ಬಿದ್ದಿದ್ದರೆ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು” ಎಂದು ಚಾಲಕ ನಾಗರಾಜ್ ತಿಳಿಸಿದರು.

ಬಸ್​ನಲ್ಲಿ 67 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

ಈ ಘಟನೆಯಿಂದ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ. ಟ್ರಾಫಿಕ್ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ