Breaking News

ಕೆಎಸ್​ಆರ್​ಟಿಸಿ ಬಸ್ ಮೇಲೆ ಮುರಿದು ಬಿದ್ದ ಮರದ ಕೊಂಬೆ

Spread the love

ಬೆಂಗಳೂರು: ದೊಡ್ಡಬಳ್ಳಾಪುರ-ಬೆಂಗಳೂರು ಮಾರ್ಗದಲ್ಲಿ ಕಾವೇರಿ ಭವನಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮೇಲೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ತಕ್ಷಣವೇ ಚಾಲಕ ಬಸ್​ ಅನ್ನು ಬಲಕ್ಕೆ ಚಲಾಯಿಸುವ ಮೂಲಕ ಪ್ರಾಣಹಾನಿ ತಪ್ಪಿಸಿದ್ದಾರೆ.

ಪ್ಯಾಲೆಸ್ ಗುಟ್ಟಹಳ್ಳಿಯ ಅರಮನೆ ಮೈದಾನದ ಮುಂಭಾಗ ಗೇಟ್ ನಂಬರ್ 7ರಲ್ಲಿ ಇಂದು ಮಧ್ಯಾಹ್ನ ಘಟನೆ ನಡೆಯಿತು. ನಿಧಾನಗತಿಯಲ್ಲಿ ಬಸ್ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯ ಮರದ ಕೊಂಬೆ ಬಸ್ ಮೇಲೆ ಬಿದ್ದಿದೆ. ಕೊಂಬೆ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ನಾಗರಾಜು, ರಸ್ತೆಯ ಬಲಕ್ಕೆ ಬಸ್ ತಿರುಗಿಸಿದ್ದಾರೆ. ಹೀಗಾಗಿ ಕೊಂಬೆ ಬಸ್​ನ ಕನ್ನಡಿ ಮೇಲೆ ಬಿದ್ದಿದೆ.

“ಒಂದು ವೇಳೆ ಮರದ ಕೊಂಬೆ ಬಸ್ ಮೇಲೆ ಬಿದ್ದಿದ್ದರೆ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು” ಎಂದು ಚಾಲಕ ನಾಗರಾಜ್ ತಿಳಿಸಿದರು.

ಬಸ್​ನಲ್ಲಿ 67 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

ಈ ಘಟನೆಯಿಂದ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ. ಟ್ರಾಫಿಕ್ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ