Breaking News

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

Spread the love

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ
ಜಿ.ಪಂ-ತಾ.ಪಂ ಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸ್ಥಾನ ರಾಜೀವ್ ಗಾಂಧಿ ಚಿಂತನೆ; ಡಿಸಿಎಂ ಡಿ.ಕೆ.ಶಿವಕುಮಾರ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ರಾಜಧಾನಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು.
ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಮಾಡಿದರು. ನಂತರ ಭಯೋತ್ಪಾದ ನಿರ್ಮೂಲನೆಗಾಗಿ ಪ್ರಮಾಣವಚನವನ್ನು ಸ್ವೀಕರಿಸಲಾಯಿತು.
ಈ ವೇಳೆ ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಅವರು ರಾಜೀವ್ ಗಾಂಧಿ ಅವರ ನಿಧನದಿಂದ ದೇಶಕ್ಕೆ ತುಂಬ ನಷ್ಟವಾಗಿದೆ. ಜಿಲ್ಲಾ ಮತ್ತು ತಾಲೂಕಾ ಪಂಚಾಯಿತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ನೀಡಿದ್ದು, ರಾಜೀವ್ ಗಾಂಧಿ ಅವರ ಚಿಂತನೆ ಎಂದು ಹೇಳುತ್ತ, ರಾಜೀವ್ ಗಾಂಧಿ ಅವರೊಂದಿಗಿನ ಒಡನಾಟವನ್ನು ನೆನೆನದರು.
ಕೆ.ಜೆ. ಜಾರ್ಜ್, ವೀರಪ್ಪ ಮೊಯ್ಲಿ, ಬಿ.ಕೆ ಹರಿಪ್ರಸಾದ, ಸಲೀಂ ಅಹಮದ್, ನಝೀರ್ ಅಹ್ಮದ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ