Breaking News

ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ..

Spread the love

ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ….ಧಾರವಾಡದಲ್ಲಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಗೆಹ್ಲೋಟ್ ಚಾಲನೆ.
May be an image of 9 people, dais and text
ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಗುರುವಾರ ಧಾರವಾಡದ ರೈಲು ನಿಲ್ದಾಣದಲ್ಲಿ ಈ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.May be an image of 13 people, dais and text
ದೇಶದ ವಿವಿಧ ಕಡೆಗಳಲ್ಲಿ ನವೀಕರಣಗೊಂಡ ಒಟ್ಟು 103 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಇಂದು ಉದ್ಘಾಟಿಸಿದ್ದು, ಅದರಲ್ಲಿ ಧಾರವಾಡದ ರೈಲು ನಿಲ್ದಾಣ ಕೂಡ ಉದ್ಘಾಟನೆಯಾಗಿದೆ. ಧಾರವಾಡದ ರೈಲು ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ರಾಜ್ಯಪಾಲ ಗೆಹ್ಲೋಟ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಒಟ್ಟು 17.1 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಈ ರೈಲು ನಿಲ್ದಾಣವನ್ನು ನವೀಕರಣ ಮಾಡಲಾಗಿದೆ. ಎರಡನೇ ಪ್ರವೇಶ ದ್ವಾರ ಸೇರಿ ಪ್ರವೇಶಕ್ಕಾಗಿ 3 ಲಿಫ್ಟ್‌ಗಳನ್ನು ಅಳವಡಿಕೆ ಮಾಡಲಾಗಿದೆ.May be an image of 8 people, television, dais, newsroom and text
ಹೊಸ ಮೇಲ್ಛಾವಣಿ ಮತ್ತು ನೆಲಹಾಸಿನ ಫ್ಲಾಟ್‌ ಫಾರ್ಮ್ ಉನ್ನತೀಕರಣ, ಪ್ರಯಾಣಿಕರ ಅನುಕೂಲಕ್ಕಾಗಿ ಕೆಫೆಟೇರಿಯಾ ವ್ಯವಸ್ಥೆ ಸೇರಿ ಹಲವು ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ.
ಧಾರವಾಡದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಅಮೃತ ದೇಸಾಯಿ, ಮೇಯರ್ ರಾಮಣ್ಣ ಬಡಿಗೇರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ