Breaking News

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ

Spread the love

ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ
ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ.
ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ ಬಂದಂತಾಗಿದೆ. ನಿರಂತರವಾದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿಮಟ್ಟ ಸುಮಾರು 4 ಅಡಿಯಷ್ಟು ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆರೆಯಾಗಿ ಪರಣಮಿಸಿವೆ.
ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಗಳ ಹಾಗೂ ಪಟ್ಟಣಗಳ ಜನ-ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು.ಆದರೆ ಕಳೆದೆರಡು ದಿನಗಳಿಂದ ನೀರಿನ ಮಟ್ಟ ಏರಿಕೆ ಕಂಡು ಜನರು ಸಂತಸ ವ್ಯಕ್ತಪಡಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ