Breaking News
Home / Uncategorized / ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

Spread the love

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಅಂತರ್ಜಲ ಹೆಚ್ಚಳ, ನರಗುಂದ ಬಾಬಾಸಾಹೇಬ್ ಆಳ್ವಿಕೆಯ ಸುರಂಗ ಮಾರ್ಗ, ಧಾನ್ಯಗಳ ಸಂಗ್ರಹಣೆಗೆ ತೆಗೆದ ಕಣಿಜ ಇರಬಹುದು. ಹೀಗಾಗಿ ಭೂಮಿ ಕುಸಿದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಭೂ ತಜ್ಞರಿಂದಲೂ ಸ್ಪಷ್ಟನೆ ಸಿಗುತ್ತಿಲ್ಲ. ಘಟನೆ ನಡೆದ ವಿಷಯ ತಿಳಿದ ನರಗುಂದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರು ಇದೇ ಕ್ಷೇತ್ರದವರಾಗಿರುವುದರಿಂದ ಕಾಳಜಿ ವಹಿಸಿ ಇದರಿಂದ ಮುಕ್ತಿ ಕೊಡಿಸಬೇಕು ಎಂದು ಜನ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಕಾಯಕಲ್ಪಕ್ಕೆ ಕಾದಿದೆ ಶತಮಾನದ ಕೆರೆ

Spread the love ಚಿಕ್ಕೋಡಿ: ‘ಕೆರೆಯನ್ನು ಕಟ್ಟಿಸು. ಬಾವಿಯನ್ನು ಸವೆಸು….’ ಎಂದು ಕನ್ನಡ ಶಾಸನವೊಂದರಲ್ಲಿ ಬರೆದಿರುವುದು ಎಲ್ಲರಿಗೂ ಗೊತ್ತಿದೆ. ಆದರೆ, ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ