ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ಅಧಿಕಾರಿ ಆದಂತ ಡಾಕ್ಟರ್ ವಿವೇಕ್ ಹೊನ್ನಳ್ಳಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ.
ಯುವ ಜನತೆ ತಂಬಾಕು ಸಿಗರೇಟ್ ಮತ್ತು ಮುಂತಾದ ವ್ಯಸನಗಳಿಂದ ದೂರವಿದ್ದು ಉತ್ತಮ ಆರೋಗ್ಯವನ್ನು ಹೊಂದಿ ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಂಡು ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕೆಂದು ಕರೆಕೊಟ್ಟರು. ಡಾ ಶ್ವೇತಾ ಪಾಟೀಲ್ ಜಿಲ್ಲಾ ಸಮಾಲೋಚಕರು ತಂಬಾಕು ನಿಯಂತ್ರಣ ಕಾರ್ಯಕ್ರಮ ಬೆಳಗಾವಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ತಂಬಾಕು ಹಾಗೂ ಮಾದಕ ವಸ್ತುಗಳಿಂದ ಶಾರೀರಿಕ ಹಾಗೂ ಬೌದ್ಧಿಕ ಪರಿಣಾಮಗಳ ಕುರಿತು ಜಾಗೃತಿಯನ್ನು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ. ಜ್ಯೋತಿ ಹಿರೇಮಠ್ ಇವರು ವಹಿಸಿದ್ದರು. ಇವರು ಮಾತನಾಡುತ್ತಾ ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸಗಳನ್ನು ರೂಡಿಸಿಕೊಂಡು ಬೌದ್ಧಿಕ ಹಾಗೂ ಶಾರೀರಿಕವಾಗಿ ಸದೃಢವಾಗಿ ಉತ್ತಮವಾದ ಆರೋಗ್ಯವನ್ನು ಹೊಂದಬೇಕು ಎಂದು ಹೇಳಿದರು.
ಮಹಾವಿದ್ಯಾಲಯದ ದೈಹಿಕ ಶಿಕ್ಷಕರಾದ ಡಾಕ್ಟರ್ ರಿಚ್ಚಾ ರಾವ್ ಇವರು ಕಾರ್ಯಕ್ರಮವನ್ನು ಸಂಯೋಜನೆ ಮಾಡಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಆಕಾಶ್ ಅಂತಿಮ ವರ್ಷದ ಬಿಎ ಎಲ್ ಎಲ್ ಬಿ ವಿದ್ಯಾರ್ಥಿ ಸಮಾರೋಪ ಸಮಾರಂಭವನ್ನು ನೆರವೇರಿಸಿ