Breaking News

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..

Spread the love

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್..
ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ
ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು.
ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಸವದತ್ತಿ ತಾಲೂಕಿನ ಹಿರಿಯೂರು ಗ್ರಾಮದ ದಾವಲಬಿ ಕಾಗದಾಳ (26) ಕೊಲೆಯಾದವಳು. ಪತ್ನಿಯನ್ನು ಕೊಲೆ ಮಾಡಿದ ಪತಿ ದಿವಾನ್ ಸಾಬ್ ಕಾಣೆಯಾಗಿದ್ದಾಳೆ ಎಂದು ಮುನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ.
ಹತ್ತು ದಿನಗಳ ಬಳಿಕ ಪತ್ನಿಯ ಶವ ಸಿಕ್ಕಿದೆ. ಕಳೆದ ಮೂರು ತಿಂಗಳಿನಿಂದ ದಾವಲಬಿ ತವರು ಮನೆಯಲ್ಲಿದ್ದಾಕೆಯನ್ನು ಮನೆಗೆ ಕರೆದುಕೊಂಡು ಬಂದು ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಹಿನ್ನೆಲೆಯಲ್ಲಿ ದಾವಲಬಿ ಮೃತಪಟ್ಟಿದ್ದಾಳೆ ಎಂದರು.
ಈ ಪ್ರಕರಣದಲ್ಲಿ ದಿವಾನ್ ಸಾಬ್, ರಫಿಕ್ ಕಾಗದಾಳ, ರೇಷ್ಮಾ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Spread the love

About Laxminews 24x7

Check Also

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the loveಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ