Breaking News

ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

Spread the love

ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಬಾಲಕನಿಗೆ ಅಂದಿನಿಂದಲೇ ಚಿಕಿತ್ಸೆ ಮುಂದುವರಿದಿತ್ತು.
ಆದರೆ ಆತ ಚೇತರಿಸಿಕೊಂಡಿರಲಿಲ್ಲ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರ ಬಾಲಕನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಬಿಮ್ಸ್‍ನಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ಕೊರೋನಾ ಸೋಂಕು ವ್ಯಾಪಿಸುತ್ತಿದೆ. ಇಂಥದರ ನಡುವೆ ನಾಯಿ ಕಡಿತದಿಂದ ಗಾಯಗೊಂಡ ಬಾಲಕ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ