Breaking News

ಮಳೆ ಆರ್ಭಟದಿಂದ ಚಿಂಚಲಿ – ಕುಡಚಿ ಸೇತುವೆ ಜಲಾವೃತ

Spread the love

ಚಿಕ್ಕೋಡಿ (ಬೆಳಗಾವಿ): ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸುತ್ತಿದೆ. ರಾಜ್ಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕುಡಚಿ ಸುತ್ತಮುತ್ತಲಿನ ಜನ-ಜಾನುವಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕುಡಚಿ ಪಟ್ಟಣದಲ್ಲಿ ಹಾಗೂ ಕೆಲವು ಗ್ರಾಮದಲ್ಲಿ ರಾತ್ರಿ ರಭಸದ ಮಳೆ ಸುರಿದಿದ್ದು, ಸುಕ್ಷೇತ್ರ ಮಾಯಕ್ಕ ದೇವಸ್ಥಾನನಕ್ಕೆ ತೆರಳುವ ಚಿಂಚಲಿ ಗ್ರಾಮ ಹಾಗೂ ಕುಡಚಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಸ್ಥಳೀಯರು ಸಂಕಷ್ಟ ಎದುರಾಗಿದೆ.

ಸತತ ಎರಡು ಗಂಟೆಗಳ ಕಾಲ ಬಿಟ್ಟು ಬಿಡದೇ ಮಳೆ ಸುರಿದಿದೆ. ವರುಣನ ಆರ್ಭಟಕ್ಕೆ ಕುಡಚಿ ಪಟ್ಟಣದ ನಿವಾಸಿಗಳು ತತ್ತರಿಸಿ ಹೋಗಿದ್ದಾರೆ. ಎಲ್ಲಿ ನೋಡಿದರಲ್ಲಿ ನದಿಯಂತೆ ಹರಿದು ಬರುತ್ತಿರುವ ಮಳೆ ನೀರನ್ನು ಕಂಡು ಆಘಾತ ವ್ಯಕ್ತಪಡಿಸುತ್ತಿದ್ದಾರೆ. ಭಾರೀ ಮಳೆಯಿಂದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದತರಿಂದ ಹಲವು ರಸ್ತೆಗಳು ಜಲಾವೃತಗೊಂಡಿವೆ. ಮಳೆ ಅವಾಂತರದಿಂದ ಬಹಳಷ್ಟು ಅಪಾಯ ಸೃಷ್ಟಿಯಾಗಿದೆ.

Spread the love

About Laxminews 24x7

Check Also

ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಮಾತನಾಡಿದ್ದಾರೆ.

Spread the loveಚಿಕ್ಕೋಡಿ (ಬೆಳಗಾವಿ) : ಸರ್ಕಾರ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ನಾವು ಅದರ ಪೂರ್ವಭಾವಿಯಾಗಿ ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ