ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ.
ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ ಮನೆಯಿಂದ ಹೊರಬಂದಿದ್ದು, ಚಿರತೆ ದಾಳಿ ಮಾಡಿ ಓಡಿ ಹೆದರಿ ಓಡಿ ಹೋಗಿದೆ. ಸಂತೋಷ್ ಅವರ ಎರಡೂ ಕೈಗಳಿಗೆ ಪರಚಿದ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಕೋಲಾ ಪಿಐ ಚಂದ್ರಶೇಖರ್ ಮಠಪತಿ ಮತ್ತು ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ಮನುಷ್ಯರ ಮೇಲೆ ದಾಳಿ ಮಾಡಿರುವುದರಿಂದ ನಮ್ಮೆಲ್ಲರಲ್ಲೂ ಆತಂಕ ಹೆಚ್ಚಿದೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಮತ್ತೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜನ, ಜಾನುವಾರಗಳನ್ನು ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಅಗಸೂರು ಗ್ರಾ.ಪಂ.ಸದಸ್ಯ ಆನಂದು ಗೌಡ ಆಗ್ರಹಿಸಿದರು.
Laxmi News 24×7