ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ
ಅಂ.ರಾ. ಮಾದಕ ದ್ರವ್ಯ ಸೇವನೆ, ಸಾಗಾಣಿಕೆ ವಿರೋಧಿ ದಿನಾಚರಣೆ
ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಆಯೋಜನೆ
ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗ
ಕಾನೂನು ಸೇವಾ ಪ್ರಾಧಿಕಾರದ ಸಂದೀಪ ಪಾಟೀಲರಿಂದ ಉದ್ಘಾಟನೆ
ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಸಂಘಟನೆಗಳ ಸಂಯುಕ್ತ ಸಂಯೋಜನೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯ ನಿಮಿತ್ಯ ಜಾಗೃತಿಯನ್ನು ಮೂಡಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ, ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ, ಕೆ.ಎಲ್.ಇ. ನರ್ಸಿಂಗ್ ಕಾಲೇಜ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಹಿಂಡಲಗಾ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಅಕ್ರಮ ಸಾಗಾಣಿಕೆ ಕುರಿತು ಕೇಂದ್ರ ಕಾರಾಗೃಹ, ಹಿಂಡಲಗಾದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸದರಿ ಕಾರ್ಯಕ್ರಮವನ್ನು ಸಂದೀಪ ಪಾಟೀಲ, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಇತ್ತಿಚಿನ ದಿನಗಳಲ್ಲಿ ಮಾದಕ ವಸ್ತುವಿನ ಚಟದಿಂದ ಯುವಜನರು ತುಂಬಾ ತೊಂದರೆ ಅನುಭವಿಸುತ್ತಿದ್ದು, ಸದರಿ ಪಿಡುಗನ್ನು ನಿರ್ಮೂಲನೆ ಮಾಡುವುದು ಅನಿವಾರ್ಯವಾಗಿದ್ದು, ಅದನ್ನು ಎಲ್ಲರೂ ಕೂಡಿಕೊಂಡು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳಿಂದ ಜಾಗೃತಿಪರ ನಾಟಕವನ್ನು ಪ್ರದರ್ಶಿಸಲಾಯಿತು.
ಕೃಷ್ಣಮೂರ್ತಿ, ಮುಖ್ಯ ಅಧೀಕ್ಷರು, ಕೇಂದ್ರ ಕಾರಾಗೃಹ, ಬೆಳಗಾವಿ, ಡಾ. ಗೀತಾ ಕಾಂಬ್ಳೆ, ಜಿಲ್ಲಾ ಮಾನಸಿಕ ಆರೋಗ್ಯ ಕಾಠ್ಯಕ್ರಮ ಅಧಿಕಾರಿಗಳು, ಸಂಗನಗೌಡರ, ಸಹಾಯಕ ಉಪನ್ಯಾಸಕರು. ಕೆ. ಎಲ್. ಇ. ನರ್ಸಿಂಗ ಕಾಲೇಜ, ಬೆಳಗಾವಿ, ಮಲ್ಲಿಕಾರ್ಜುನ ಕೊಣ್ಣೂರ, ಸಹಾಯಕ ಅಧೀಕ್ಷಕರು. ಬಿ. ಎಲ್. ಪೂಜಾರಿ, ಆಡಳಿತಾಧಿಕಾರಿಗಳು, ಡಾ. ಸಂಜಯ ಡುಮ್ಮಗೋಳ, ಮುಖ್ಯ ಆರೋಗ್ಯಾಧಿಕಾರಿಗಳು, ಡಾ. ಸರಸ್ವತಿ ತೇಣಗಿ, ಮಾನಸಿಕ ವೈದ್ಯರು. ಕೇಂದ್ರ ಕಾರಾಗೃಹ, ಹಿಂಡಲಗಾ, ಬೆಳಗಾವಿ ಇವರು ಉಪಸ್ಥಿತರಿದ್ದರು.