Breaking News

ಸರ್ಕಾರಿ ಕಟ್ಟಡಗಳಿಗೆ ಇಟ್ಟ ರಾಜಕಾರಣಿಗಳ ಹೆಸರು ತೆರವಿಗೆ ಹೈಕೋರ್ಟ್​ ಗಡುವು

Spread the love

ದಾವಣಗೆರೆ: ಸರ್ಕಾರಿ ಕಟ್ಟಡ, ಸಭಾಂಗಣಗಳು, ರಸ್ತೆ, ಉದ್ಯಾನವನ ಹೀಗೆ ವಿವಿಧ ಸರ್ಕಾರಿ ಆಸ್ತಿಗಳ ಮೇಲೆ ಜನಪ್ರತಿನಿಧಿಗಳ ಹೆಸರು ನಾಮಕರಣಕ್ಕೆ ಹೈಕೋರ್ಟ್​ ಬ್ರೇಕ್​ ಹಾಕಿದೆ. ಜೀವಂತವಿರುವ ರಾಜಕಾರಣಿಗಳ ಹೆಸರುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್​ ದಾವಣಗೆರೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ದಾವಣಗೆರೆ ಮಹಾನಗರ ಪಾಲಿಕೆ ಸಭಾಂಗಣ, ಜಿಲ್ಲಾ ಪಂಚಾಯತ್​ ಸಭಾಂಗಣ, ನವೀಕೃತ ಹಳೇ ಬಸ್​ ನಿಲ್ಧಾಣ, ಉದ್ಯಾವನಗಳಿಗೆ ನಾಮಕರಣ ಮಾಡಿರುವ ಜನಪ್ರತಿನಿಧಿಗಳ ನಾಮಫಲಕಗಳನ್ನು ತೆಗೆಯಲು ಹೈಕೋರ್ಟ್​ ನಾಲ್ಕು ವಾರಗಳ ಗಡುವು ನೀಡಿದೆ.

ಜನಪ್ರತಿನಿಧಿಗಳ ಹೆಸರು ನಾಮಕರಣ ಪ್ರಶ್ನಿಸಿ ದಾವಣಗೆರೆಯ ವಕೀಲ ರಾಘವೇಂದ್ರ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. “ಸರ್ಕಾರಿ ಕಟ್ಟಡಗಳಿಗೆ ಸ್ವಾತಂತ್ರ್ಯ ಹೋರಾಟಗಾರರ, ಇಲ್ಲವೇ ಸಾವನ್ನಪ್ಪಿದ ಮಹನೀಯರ ಹೆಸರನ್ನು ಇಡಬೇಕು. ಆದರೆ ದಾವಣಗೆರೆಯಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೆ ಶಾಮನೂರು ಶಿವಶಂಕರಪ್ಪ ಹೆಸರು, ಕುಂದುವಾಡ ಕೆರೆಗೆ ಸಚಿವ ಎಸ್​.ಎಸ್​.ಮಲ್ಲಿಕಾರ್ಜುನ​ ಹೆಸರು, ಬಡಾವಣೆಗಳಿಗೆ ಎಸ್.ಎ.ರವೀಂದ್ರನಾಥ್​ ಹೆಸರು ಸೇರಿದಂತೆ, ಹೀಗೆ ಹಲವು ಸಭಾಂಗಣಗಳಿಗೆ ಬದುಕಿದ್ದ ಜನಪ್ರತಿನಿಧಿಗಳ ಹೆಸರನ್ನು ಇಡಲಾಗಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.​ ಅದರ ವಿಚಾರಣೆ ನಡೆಸಿದ ಹೈಕೋರ್ಟ್, ಹೆಸರು ತೆರವಿಗೆ ಸಕ್ಷಮ ಪ್ರಾಧಿಕಾರಕ್ಕೆ 4 ವಾರಗಳ ಗಡುವು ನೀಡಿ ಜಿಲ್ಲಾಧಿಕಾರಿ, ಸಿಎಸ್​ಗೆ​ ಸೂಚನೆ ನೀಡಿದೆ.

ಜೀವಂತ ವ್ಯಕ್ತಿಗಳ ಹೆಸರು ನಾಮಕರಣ ನಿಷಿದ್ಧವೆಂದ ಹೈಕೋರ್ಟ್: 2012ರ ಆದೇಶವನ್ನು ಉಲ್ಲೇಖಿಸಿರುವ ಹೈಕೋರ್ಟ್​​, ಜೀವಂತ ವ್ಯಕ್ತಿಗಳ ಹೆಸರು ನಾಮಕರಣ ನಿಷಿದ್ಧ ಎಂದು ಹೇಳಿದೆ. ಸರ್ಕಾರಿ ಆಸ್ತಿಗಳ ಮೇಲಿರುವ ಇಂತಹ ಹೆಸರುಗಳ ಬದಲಾವಣೆಗೆ ಆದೇಶಿಸಿದೆ.‌


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ