Breaking News

ಎಸಿ ಬೋಗಿಗಳಲ್ಲಿ ಶ್ರೀಮಂತರನ್ನೇ ಟಾರ್ಗೆಟ್​ ಮಾಡಿ ಕಳ್ಳತನ

Spread the love

ಹಾಸನ: ರೈಲುಗಳ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ​ ಕಳ್ಳನನ್ನು ಬಂಧಿಸಿರುವ ಅರಸೀಕೆರೆ ರೈಲ್ವೆ ಪೊಲೀಸರು, ಆರೋಪಿಯಿಂದ 22.75 ಲಕ್ಷ ಮೌಲ್ಯದ 218 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಜಿತೇಂದ್ರಕುಮಾರ ಚಾವ್ಲಾ (37) ಬಂಧಿತ ಆರೋಪಿ. ಈತನ ಮೇಲೆ ಮಹಾರಾಷ್ಟ್ರ, ತಮಿಳುನಾಡು ಹಾಗೂ ಉತ್ತರಾಖಂಡ ರೈಲ್ವೆ ಪೊಲೀಸ್​ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸುಮಾರು 13 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಯು ಪೊಲೀಸ್ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ಎಸಿ ಕೋಚ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದ ಆರೋಪಿ ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್​ ಮಾಡಿ ಕಳವು ಮಾಡುತ್ತಿದ್ದ ಎಂದು ರೈಲ್ವೆ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

7 ವರ್ಷಗಳ ಬಳಿಕ ಸೆರೆಸಿಕ್ಕ ಖದೀಮ: ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅವರ ಚಿನ್ನಾಭರಣ ಕಳ್ಳತನವಾಗಿತ್ತು. ಇದೇ ಆರೋಪಿ ಸ್ವಾಮೀಜಿಯ ಚಿನ್ನಾಭರಣ, ನಗದು ಕಳವು ಮಾಡಿದ್ದ. ಸದ್ಯ ಏಳು ವರ್ಷಗಳ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿ 2018ರಲ್ಲಿ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲೆದರ್​​ ಬ್ಯಾಗ್‌ನಲ್ಲಿ ಚಿನ್ನದ ಆಭರಣ ಹಾಗೂ ನಗದು ಹಣವನ್ನು ಇಟ್ಟು ಸ್ವಾಮೀಜಿ ನಿದ್ದೆಗೆ ಜಾರಿದ್ದರು. ತಡರಾತ್ರಿ ಎಚ್ಚರಗೊಂಡು ನೋಡಿದ ವೇಳೆ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ