ಹುಬ್ಬಳ್ಳಿ: ಕರ್ನಾಟಕದ ಗಡಿಭಾಗದ ಸಮೀಪವಿರುವ ಗೋವಾ ರಾಜ್ಯದ ದೂಧ್ಸಾಗರ್ ಜಲಪಾತ ಈಗ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯತ್ತಿದೆ. ಅದ್ರೆ ಪ್ರವಾಸಕ್ಕೆ ಹೋದವರು ಅಲ್ಲಿನ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು, ಮಳೆಗಾಲದ ಸಂದರ್ಭದಲ್ಲಿ ದೂಧ್ಸಾಗರ್ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತದೆ. ಆದ್ರೆ ಕ್ಯಾಸಲ್ರಾಕ್-ದೂಧ್ಸಾಗರ್ ಅತ್ಯಂತ ಸೂಕ್ಷ್ಮ ಹಾಗೂ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸುರಂಗಗಳು, ಕಡಿದಾದ ಕಂದರಗಳು ಮತ್ತು ಕಾಡು ಪ್ರಾಣಿಗಳ ಅಪಾಯದಿಂದಾಗಿ ಚಾರಣ ನಿಷೇಧಿಸಲಾಗಿದೆ.
ಕ್ಯಾಸಲ್ರಾಕ್ನ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ದೂಧ್ಸಾಗರ್ ಜಲಪಾತಗಳನ್ನು ತಲುಪಲು ಪ್ರಯತ್ನಿಸುವ ಪ್ರವಾಸಿಗರು ರೈಲ್ವೆ ಆವರಣಕ್ಕೆ ಅನಧಿಕೃತವಾಗಿ ಪ್ರವೇಶಿಸುವುದನ್ನು ತಡೆಯಲು ವಿಶೇಷ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ, ಅನಧಿಕೃತವಾಗಿ ಪ್ರವೇಶ ಮಾಡಿದ 21 ಜನರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.ಅವರ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 147 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಬಂಧಿತ ವ್ಯಕ್ತಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಮತ್ತು ದಂಡವನ್ನು ಪಾವತಿಸಲು ಅವರು ಹುಬ್ಬಳ್ಳಿಯ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ರೈಲ್ವೆ) ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ.ಪ್ರವಾಸಿಗರು ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೊ ಎಕ್ಸ್ಪ್ರೆಸ್ ಮೂಲಕ ಸ್ಥಳಕ್ಕೆ ಆಗಮಿಸಿ ರೈಲ್ವೆ ಹಳಿಗಳ ಉದ್ದಕ್ಕೂ ನಡೆದು ಜಲಪಾತಗಳಿಗೆ ತೆರಳಿದ್ದರು. ಸುರಕ್ಷತಾ ಕಾರಣಗಳಿಗಾಗಿ ಇದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ
Laxmi News 24×7