Breaking News

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the love

ಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಸವಾಲು ಹಾಕಿದರು.

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಐದೇ ನಿಮಿಷದಲ್ಲಿ ಅನುಮೋದನೆ ಪಡೆಯುವುದಾಗಿ ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಗದಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಹೆಚ್.ಕೆ.ಪಾಟೀಲ್, ”ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ. ಅಂತಾರಾಜ್ಯ ಜಲ ವಿವಾದ ಕಾಯ್ದೆಯಡಿ ಕಾನೂನಾತ್ಮಕವಾಗಿ ಕೇಂದ್ರಕ್ಕೆ ಆದೇಶಿಸುವ ಅಧಿಕಾರವಿದೆ” ಎಂದು ತಮಿಳುನಾಡಿನ ಡಿಎಂಕೆಯ ಒಪ್ಪಿಗೆಗಾಗಿ ಒತ್ತಾಯಿಸುವ ಕುಮಾರಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.”ತಮಿಳುನಾಡನ್ನು ಒಪ್ಪಿಸುವ ಜವಾಬ್ದಾರಿ ಕುಮಾರಸ್ವಾಮಿಯವರಿಗೆ ಯಾಕೆ? ಅವರ ಒಪ್ಪಿಗೆಯ ಅಗತ್ಯವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಲು ಸಾಧ್ಯವಿಲ್ಲವೇ? ಅಂತಾರಾಜ್ಯ ಜಲ ಕಾಯ್ದೆಯಡಿ ಕಾನೂನು ರೀತಿಯಲ್ಲಿ ಎಲ್ಲವನ್ನೂ ಮಾಡಲಾಗಿದೆ. ಒಪ್ಪಿಗೆ ತರಬೇಕೆಂಬ ವಿಷಯ ಕಾಯ್ದೆಯಲ್ಲಿ ಎಲ್ಲಿದೆ?” ಎಂದು ಪಾಟೀಲ್ ಪ್ರಶ್ನಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ