Breaking News

ಮಹಿಳೆಯರೇ ಎಚ್ಚರ: ಬಿರಿಯಾನಿ ಎಲೆ ಅಂತ ನೀಲಗಿರಿ ಎಲೆ, ಪಪ್ಪಾಯಿ ಬೀಜ ಮಿಶ್ರಿತ ಕಾಳು ಮೆಣಸು ಮಾರಾಟ!

Spread the love

ರಾಯಚೂರು, ಜುಲೈ 11: ರಾಯಚೂರು (Raichur) ಜಿಲ್ಲೆಯ ಮಾನ್ವಿ ಪಟ್ಟಣದ ಇಸ್ಲಾಂ ನಗರದಲ್ಲಿನ ಪಾಳು ಬಿದ್ದ ಮನೆಯೊಂದರ ಬಳಿ ಈ ಕಲಬೆರಕೆ ಮಸಾಲೆ (Masala) ಪದಾರ್ಥಗಳನ್ನು ತಯಾರಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಒಟ್ಟು 846 ಕೆಜಿ ಕಲಬೆರಿಕೆ ಮಸಾಲೆ ಪದಾರ್ಥಗಳನ್ನು ಜಪ್ತಿ ಮಾಡಿದ್ದಾರೆ.

ಆರೋಪಿಗಳು ದನಿಯಾ ಕಾಳು, ಮೆಣಸಿನ ಕಾಳು, ಬಿರಿಯಾನಿ ಎಲೆ, ಚಿಕನ್ ಮಸಾಲೆ, ಸಾಂಬರ್ ಮಸಾಲೆಯನ್ನು ಕೆಮಿಕಲ್​ ಬಳಸಿ ತಯಾರು ಮಾಡುತ್ತಿದ್ದರು. ಬಿರಿಯಾನಿ ಎಲೆ ಅಂತ ನೀಲಗಿರಿ ಮರದ ಎಲೆಗಳಿಗೆ ಬಣ್ಣ ಹಾಕಿ ತಯಾರಿಸಿದ್ದರು. ಅಲ್ಲದೆ, ಪಪ್ಪಾಯಿ ಹಣ್ಣಿನ ಬೀಜಗಳನ್ನು ಮೆಣಿಸಿನ ಕಾಳುಗಳಲ್ಲಿ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದರು. ದನಿಯಾ ಬೀಜಗಳಿಗೆ‌ ವಿವಿಧ ಕೆಮಿಕಲ್​ಗಳನ್ನು ಬಳಕೆ ಮಾಡಲಾಗಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ. ಬಟಾಣಿಗಳಿಗೆ ಹಸಿರು ಬಣ್ಣ ಮಿಶ್ರಣ ಮಾಡಿ, ಜವಾರಿ ಅಂತ ಗ್ರಾಹಕರನ್ನು ನಂಬಿಸುತ್ತಿದ್ದರು ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಅಧಿಕಾರಿಗಳ ದಾಳಿ ಮಾಡುತ್ತಿದ್ದಂತೆ, ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿ ಗಫೂರ್ ಹಾಗೂ ಈತನ ಜೊತೆಗಾರರು ಪರಾರಿಯಾಗಿದ್ದಾರೆ. ದಾಳಿ ವೇಳೆ ಒಟ್ಟು‌ 846 ಕೆಜಿ ವಿವಿಧ ನಕಲಿ ಮಸಾಲೆ ಪದಾರ್ಥಗಳು ಜಪ್ತಿ ಮಾಡಲಾಗಿದೆ. ಈ ಪೈಕಿ 367 ಕೆಜಿ ಬಣ್ಣ ಮಿಶ್ರಿತ ದನಿಯಾ ಕಾಳು, 220 ಕೆಜಿ ಅರಿಶಿನ ಹಾಗೂ ಕಡಲೆಕಾಯಿ, 150 ಕೆಜಿ ಕೆಂಪು ಕಡಲೆ, 16 ಕೆಜಿ ಕೆಂಪು ಕೊಬ್ಬರಿ, 6.5 ಕೆಜಿ ನೀಲಗಿರಿ ಎಲೆ, 43 ಕೆಜಿ ಕಾಳು ಮೆಣಸಿನಂತಿರುವ ಪಪ್ಪಾಯ ಬೀಜ, 42 ಕೆಜಿ ಚಕ್ಕೆ, 500 ಗ್ರಾಂ ಹಳದಿ ಹಾಗೂ ಕೆಂಪು ಬಣ್ಣದ ಕೆಮಿಕಲ್ ಪೌಡರ್ ಜಪ್ತಿ ಮಾಡಲಾಗಿದೆ.

ಸದ್ಯ ಆಹಾರ ಸುರಕ್ಷತಾ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ