Breaking News

ಭರ್ತಿಗೂ ಮುನ್ನ ಭದ್ರಾ ಜಲಾಶಯದಿಂದ ನದಿಗೆ 1,200 ಕ್ಯೂಸೆಕ್ ನೀರು ಬಿಡುಗಡೆ

Spread the love

ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಿಂದ 1,200 ಕ್ಯೂಸೆಕ್ ನೀರನ್ನು ನದಿಗೆ ನಾಲ್ಕು ಕ್ರಸ್ಟ್ ಗೇಟ್​ಗಳ ಮೂಲಕ ಸುಮಾರು ಮೂರು ಅಡಿಯಷ್ಟು ನೀರು ಬಿಡುಗಡೆ ಮಾಡಲಾಗಿದೆ. 

ಜಲಾಶಯವು 186 ಅಡಿ ಗರಿಷ್ಟ ಎತ್ತರ ಹೊಂದಿದೆ. ಇಂದಿನ ನೀರಿನ ಮಟ್ಟ 174.4 ಅಡಿ ಇದೆ. ಮಳೆಗಾಲ ಇನ್ನೂ ಇದೆ. ಕಳೆದ ವರ್ಷ ಆ.1ರಂದು‌ ನೀರು ಬಿಡುಗಡೆ ಮಾಡಲಾಗಿತ್ತು.‌ ಈ ಸಲ ಜು. 11ಕ್ಕೆ ನೀರು ಬಿಡುಗಡೆ ಮಾಡಲಾಗಿದ್ದು, ಭರ್ತಿ ಮುನ್ನ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಒಳ ಹರಿವು ಹೆಚ್ಚಳವಾಗಿದ್ದು, ವಿದ್ಯುತ್ ಉತ್ಪಾದನೆಗಾಗಿ ನೀರು‌ ಬಿಡುಗಡೆ ಮಾಡಲಾಗುತ್ತಿದೆ.‌ ಜಲಾಶಯದ ಎಡದಂಡೆ ಕಾಲುವೆ ದುರಸ್ತಿ ಹಾಗೂ ಬಲದಂಡೆ ಕಾಲುವೆಯ ಗೇಟ್ ದುರಸ್ತಿ ಹಿನ್ನೆಲೆ ನೀರು ಬಿಡುಗಡೆ ಮಾಡದ ಕಾರಣ ನೇರವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ