Breaking News

ಪರಪ್ಪನ ಅಗ್ರಹಾರ ಕೈದಿಯಿಂದ ‘ಉತ್ತಮರ ಸಂಗ’ ಹಾಡು ಹಾಡಿಸಿದ ಪ್ರೇಮಕವಿ ಕೆ.ಕಲ್ಯಾಣ್

Spread the love

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ, ಜೈಲು ಸೇರಿದ್ದ ಶಿಕ್ಷಾಬಂಧಿಯಲ್ಲಿದ್ದ ಸುಪ್ತ ಪ್ರತಿಭೆ ಗುರುತಿಸಿ ಅವರಿಂದ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ತತ್ವಪದ ಹಾಡಿಸಿದ್ದಾರೆ. ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಕೆ.ಕಲ್ಯಾಣ್​ ಅವರ ಸಾಹಿತ್ಯದಲ್ಲಿ ಮೂಡಿಬಂದ ‘ಉತ್ತಮರ ಸಂಗ’ ಎಂಬ ಹಾಡನ್ನು ಕೈದಿ ಅರುಣ್ ಆಚಾರ್ ಹಾಡಿದ್ಧಾರೆ.

ಈ ಹಾಡಿನ ಮೇಕಿಂಗ್ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನಿರ್ಮಿಸಿರುವ ವಸತಿಗೃಹಗಳ ಉದ್ಘಾಟನೆ ಹಾಗೂ ಪ್ರಧಾನ ಕಚೇರಿಯ ಅನ್ಸೆಕ್ಸ್​ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿರುವ ಕೈದಿಗಳಿಗೆ ಮನಪರಿವರ್ತಿಸುವ ಹಾಗೂ ಉತ್ತಮ ಸಮಾಜದೆಡೆಗೆ ಸ್ಫೂರ್ತಿ ನೀಡುವ ಹಾಡು ಇದಾಗಿದೆ. ಗಾಯನದಲ್ಲಿ ಆಸಕ್ತಿಯಿರುವುದನ್ನು ಕಂಡ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಕೆ.ಸುರೇಶ್​ ಅವರು ಗುರುತಿಸಿ, ಪರಿಚಯವಿದ್ದ ಕೆ.ಕಲ್ಯಾಣ್ ಅವರಿಗೆ ಗಮನಕ್ಕೆ ತಂದಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ