Breaking News

ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು..

Spread the love

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೇ, ಜನರು ಮಾತ್ರ ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಭಾನುವಾರದ ದಿನವಾದ ನಾಳೆ ಸಂಪೂರ್ಣ ಲಾಕ್ ಡೌನ್ ಇರುವ ಕಾರಣದಿಂದಾಗಿ, ಮದ್ಯಪ್ರಿಯರು ಮಾತ್ರ ನಾಳೆ ಎಲ್ಲಿ ಎಣ್ಣೆ ಸಿಗೋದಿಲ್ಲವೋ ಎನ್ನುವಂತೆ ಬಾರ್, ವೈನ್ ಶಾಪ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಸಲು ಮುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆ ಆದ್ರೇ.. ಸೋಂಕಿನ ಭೀತಿಯಿಂದ ತಮ್ಮ ಊರುಗಳತ್ತ ಗುಳೇ ಹೊರಡ ಜನರು ಮತ್ತೊಂದೆಡೆ… ಇದ್ಯಾವುದರ ಪರಿವೇ ಇಲ್ಲದೇ ಎಂದಿನಂತೆ ಓಡಾಡುತ್ತಿರುವ ಜನರು ಇದ್ದಾರೆ. ಈ ಎಲ್ಲದರ ನಡುವೆ ನಾಳೆ


ಭಾನುವಾರದ ದಿನವಾಗಿರುವ ಕಾರಣ ಸಂಪೂರ್ಣ ಲಾಕ್ ಡೊನ್ ಇರೋದ್ರಿಂದಾಗಿ, ಮದ್ಯ ಖರೀದಿಯ ಭರಾಟೆ ಜೋರಾಗಿದೆ. ಬಾರ್, ವೈನ್ ಶಾಪ್ ಸೇರಿದಂತೆ ಮದ್ಯದಂಗಡಿಗಳ ಮುಂದೆ ಸಾಲು ಗಟ್ಟಿ ನಿಂತಿರುವ ಎಣ್ಣೆಪ್ರಿಯರು ಕೊರೋನಾ ಭೀತಿಯ ನಡುವೆಯೂ ಮದ್ಯ ಖರೀದಿಯಲ್ಲಿ ತೊಡಗಿದ್ದಾರೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ