Breaking News

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ

Spread the love

ಬಾಗಲಕೋಟೆ, (ಜುಲೈ 22): ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ ತಮ್ಮ ಈ ಕೃತ್ಯ ಎಸಗಿದ್ದಾನೆ. ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬುವರ 3 ವರ್ಷದ ಮಧುಕುಮಾರನ ಜೀವವನ್ನ ಚಿಕ್ಕಪ್ಪ ಭೀಮಪ್ಪ ತೆಗೆದಿದ್ದಾನೆ.

ಬಾಲಕ ಮುಂಜಾನೆ ಎಂದಿನಂತೆ ಗ್ರಾಮದ ಅಂಗನವಾಡಿಗೆ ಹೋಗಿದ್ದ. ಎಲ್ಲರೊಂದಿಗೆ ಅಂಗನವಾಡಿಯಲ್ಲಿ ಕುಳಿತ್ತಿದ್ದ ಬಾಲಕನನ್ನ ಚಿಕ್ಕಪ್ಪ ಭೀಮಪ್ಪ ನೇರವಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನೆಲದ ಮೇಲೆ ಮಗುವನ್ನ ಹಾಕಿ ಹರಿತವಾದ ಆಯುಧದಿಂದ ಕುತ್ತಿಗೆ ಕೊಯ್ದಿದ್ದಾನೆ. ನೋವಿನಿಂದ ಮಗು ಚೀರಾಟದಿಂದ ಕ್ಷಣಾರ್ಧದಲ್ಲಿ ಜೀವ ಬಿಟ್ಟಿದೆಇಂದು (ಜುಲೈ 22) ಬೆಳಿಗ್ಗೆ 9 ಗಂಟೆಗೆ ಮಗು ಮದುಕುಮಾರ ತಂದೆ ತಾಯಿ ಹತ್ತಿ ಹೊಲಕ್ಕೆ ಕೆಲಸಕ್ಕೆ ಹೋಗಿದ್ದರು. ಮದುಕುಮಾರ ಅಜ್ಜನ ಜೊತೆ ಅಂಗನವಾಡಿಗೆ ಹೋಗಿದ್ದ. ಖುಷಿ ಖುಷಿಯಿಂದ ಅಂಗಡಿಗೆ ಹೋಗಿ ಚಾಕಲೇಟ್ ತಿನ್ನುತ್ತಾ ಮಗು ಅಜ್ಜನ ಜೊತೆ ಅಂಗನವಾಡಿಗೆ ಹೋಗಿತ್ತು.

ಆದರೆ ಅಂಗನವಾಡಿ ‌ಇನ್ನು ತೆರೆದಿರಲಿಲ್ಲ.ನಂತರ ಅಜ್ಜನ ಬಿಟ್ಟು ಸ್ನೇಹಿತರೊಂದಿಗೆ ಮದುಕುಮಾರ ಆಟವಾಡುತ್ತಿದ್ದ. ಆ ವೇಳೆ ಮದುಕುಮಾರನನ್ನು ಮನೆಗೆ ಕರೆದೊಯ್ದ ಪಾಪಿ ಭೀಮಪ್ಪ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ . ‌ಮುದ್ದಾದ ಮಗು‌ ಕಳೆದುಕೊಂಡ‌ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ