Breaking News

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಜಗದೀಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ

Spread the love

ಬೆಂಗಳೂರು: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜಗದೀಶ್ ವಿರುದ್ಧ ಭಾರತೀನಗರ ಠಾಣೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ಧಾರೆ.

ಜುಲೈ 15ರಂದು ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇದುವರೆಗೂ 12 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಆರೋಪಿ ಜಗದೀಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ, ಆತನ ಇರುವಿಕೆ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಲುಕ್ ಔಟ್ ಸಕ್ಯೂರ್ಲರ್ (ಎಲ್ಓಸಿ ) ಜಾರಿ ಮಾಡಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ತಿಳಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ: ಹತ್ಯೆಗೂ ಮುನ್ನವೇ ಆರೋಪಿ ಜಗದೀಶ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಟ್ರಾವೆಲ್​ ಹಿಸ್ಟರಿಯನ್ನು ಕಲೆ ಹಾಕಿದ್ದಾರೆ. ಬೆಂಗಳೂರಿನಿಂದ ಕೇರಳ, ತಮಿಳುನಾಡು ಬಳಿಕ ಉತ್ತರಾಖಂಡ್​ಗೆ ತೆರಳಿ ಅಲ್ಲಿಂದ ವಿದೇಶಕ್ಕೆ ಹೋಗಿರುವ ಬಗ್ಗೆ ಕಂಡುಕೊಂಡಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಏರ್​​ಪೋರ್ಟ್​​ಗಳು, ಅಂತಾರಾಷ್ಟ್ರೀಯ ಭೂ ಗಡಿ ಪ್ರದೇಶ ಹಾಗೂ ಬಂದರುಗಳಿಗೆ ಪ್ರಕರಣದ ಪೂರ್ಣ ವಿವರಗಳನ್ನು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ಧಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ