ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.
ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.ಎರಡು ತಿಂಗಳಲ್ಲಿ ಎರಡು ಹುಲಿ ಸಾವು: ಕಳೆದ ತಿಂಗಳು ಜೂನ್ನಲ್ಲಿ ಇದೇ ಮೃಗಾಲಯದಲ್ಲಿ ದೇವಿ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿತ್ತು. ಇದೀಗ ಸಿಂಧು ಎಂಬ ಮತ್ತೊಂದು ಹುಲಿ ಮೃತಪಟ್ಟಿದೆ. ಇದರಿಂದ ಎರಡು ತಿಂಗಳಲ್ಲಿ ಎರಡು ಹುಲಿಗಳು ಸಾವನ್ನಪ್ಪಿವೆ.
Laxmi News 24×7