Breaking News

ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

Spread the love

ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣMay be an image of 6 people and dais
‘ಯುವ ಪರ್ವ ಪ್ರತಿಜ್ಞೆ’ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದೆ. ‌
ಯುವಕರು ಕಾಂಗ್ರೆಸ್‌ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಇಂದು ಬಿಜೆಪಿಯವರು ಪ್ರಚಾರದ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ, ಆದರೆ ನಾವು ಕಾಂಗ್ರೆಸ್‌ನವರು ನಿಸ್ವಾರ್ಥವಾಗಿ ಕೆಲಸ ಮಾಡಿದರೂ ಅದರ ಬಗ್ಗೆ ಸಾಕಷ್ಟು ಪ್ರಚಾರವಾಗುತ್ತಿಲ್ಲ. ನಮ್ಮ ಸರ್ಕಾರ, ಸಚಿವರು ಹಾಗೂ ಶಾಸಕರು ನಿರ್ವಹಿಸುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ಯುವಕರು ನಡೆಸಬೇಕು. ಜನರ ಮನವೊಲಿಸಿ, ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವುದು ನಿಮ್ಮ ಕರ್ತವ್ಯವಾಗಿದೆ‌ ಎಂದು ತಿಳಿಸಿದೆ.
May be an image of 12 people, dais and text
2028ರ ವಿಧಾನಸಭಾ ಚುನಾವಣೆಗಳಿಗೆ ಇನ್ನೂ ಮೂರು ವರ್ಷಗಳ ಕಾಲಾವಕಾಶವಿದೆ. ಆದ್ದರಿಂದ ಇಂದಿನಿಂದಲೇ ಸಜ್ಜಾಗಬೇಕು. ಈ ಅವಧಿಯಲ್ಲಿ ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರಿ, ಅವರ ಸಮಸ್ಯೆಗಳಿಗೆ ಎಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುತ್ತೀರಿ ಎಂಬುದು ಮಹತ್ವದ ಅಂಶವಾಗಿದೆ.May be an image of 9 people, dais and text
ಕೇವಲ ಮುಖ್ಯಮಂತ್ರಿಗಳು ಅಥವಾ ಸಚಿವರು ಭೇಟಿನೀಡಿದಾಗ ಭಾವಚಿತ್ರ ಅಂಟಿಸುವಷ್ಟರಲ್ಲೇ ನಿಲ್ಲದೆ, ನಿಷ್ಠಾವಂತ ಸೇವಾ ಮನೋಭಾವದೊಂದಿಗೆ ಪಕ್ಷದಲ್ಲಿ ಕಾರ್ಯನಿರ್ವಹಿಸಿ. ಯಾರು ನಿಸ್ವಾರ್ಥವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರನ್ನು ಪಕ್ಷ ಖಂಡಿತವಾಗಿ ಗುರುತಿಸುತ್ತದೆ ಎಂಬುದನ್ನು ಎಲ್ಲರೂ ನೆನಪಿನಲ್ಲಿ ಇಡಬೇಕು.

Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ