ಮಾಲೇಗಾಂವ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾಸಿಂಗ್ ಸೇರಿ ಹಲವರು ನಿರ್ದೋಷಿ
ಜಮಖಂಡಿಯಲ್ಲಿ ಶ್ರೀರಾಮಸೇನೆ ಸಂಭ್ರಮಾಚರಣೆ
ಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಹಲವರು ನಿರ್ದೋಷಿ ಎಂಬ ತೀರ್ಪಿನ ಹಿನ್ನಲೆಯಲ್ಲಿ ಶ್ರೀರಾಮ ಸೇನೆಯಿಂದ ಸಂಭ್ರಮಾಚರಣೆ ಮಾಡಲಾಯಿತು.
ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ದೇಸಾಯಿ ಸರ್ಕಲ್ನಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ತಾಕೂರ್ ಸೇರಿದಂತೆ ಹಲವರಿಗೆ ನ್ಯಾಯಾಲಯ ನಿರ್ದೋಷ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಿದರು.
ಶ್ರೀರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ನಡೆದ ಈ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಹರ್ಷೋದ್ಘಾರ ವ್ಯಕ್ತಪಡಿಸಿದರು.
ದೇಸಾಯಿ ಸರ್ಕಲ್ನಲ್ಲಿ ಸಂಭ್ರಮಾಚರಣೆಯಲ್ಲಿ ಹಲವರು ಭಾಗಿಯಾಗಿದ್ದರು.
Laxmi News 24×7