Breaking News

ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ

Spread the love

ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.


ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸೌಹಾರ್ದಯುತ ಸಭೆಯಲ್ಲಿ ಅವರು ಮಾತನಾಡಿದರು. ಅಪ್ಪಾಸಾಹೇಬ ಕುಲಗೋಡೆ ಅವರು ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಂದರ್ಭದಲ್ಲಿ ಸಾಕಷ್ಟು ರೀತಿಯ ಆರೋಪಿಗಳು ಬಂದವು. ಅವರು ಅಧ್ಯಕ್ಷರಾದ ಮೇಲೆ ಬ್ಯಾಂಕ್‌ ಉನ್ನತಿ ಕೂಡ ಆಗುತ್ತಿದೆ. ಕೆಲವರು ಇವರ ಬಳಿ ಅಧಿಕಾರ ಹೋದರೆ ಬ್ಯಾಂಕ್‌ ಮುಳುಗುತ್ತೆ, ಬ್ಯಾಂಕ್‌ ಕುಂಠಿತವಾಗುತ್ತದೆ ಎಂದು ಸುಮ್ಮನೆ ಆರೋಪ ಮಾಡಿದರು. ಆದರೆ, ಬ್ಯಾಂಕ್‌ ಎಂದಿಗೂ ಮುಳುಗುವುದಿಲ್ಲ. ಬ್ಯಾಂಕ್‌ ಹಾಗೆ ಉನ್ನತಿ ಕಾಣುತ್ತಲೇ ಇರುತ್ತದೆ. ರಾಜಕೀಯವಾಗಿ ಹೇಳುವುದಕ್ಕಾಗಿ ಹೇಳುತ್ತಲೇ ಇರುತ್ತಾರೆ ಎಂದರು.

 


ಮೊದಲಿನ ಡಿಸಿಸಿ ಬ್ಯಾಂಕಿನ ಸ್ಥಿತಿ ನೋಡಿದಾಗ, ಈ ರೀತಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರನ್ನು ಕರೆದು ಸಭೆಗಳನ್ನು ಮಾಡುತ್ತಿರಲಿಲ್ಲ. ಆದರೆ ಈಗ ಹೊಸ ಪದ್ಧತಿ ಬೆಳಗಾವಿಯಲ್ಲಿ ಆರಂಭ ಮಾಡಿದ್ದೇವೆ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಪದ್ಧತಿಯನ್ನು ಈಗ ಆರಂಭಿಸಿದ್ದೇವೆ ಎಂದು ಹೇಳಿದರು.

ನಮ್ಮೆಲ್ಲರ ಉದ್ದೇಶವೊಂದೇ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಮತ್ತು ಬಿಡಿಸಿಸಿ ಬ್ಯಾಂಕಿನ ಶ್ರೇಯೋಭಿವೃದ್ಧಿ ಮಾಡುವುದು. ಅಣ್ಣಾಸಾಹೇಬ ಜೊಲ್ಲೆ ಅವರು ಬೀರೇಶ್ವರ ಸೊಸೈಟಿ ನಿರ್ಮಿಸಿ ಅದರಲ್ಲಿ 4 ಸಾವಿರ ಕೋಟಿ ಹಣ ಠೇ‍ವಣಿ ಆಗುವಂತೆ ನೋಡಿಕೊಂಡರು. ಅಂತಹವರ ಸಲಹೆಗಳನ್ನು ಕೂಡ ಪರಿಗಣನೆ ಮಾಡಿಕೊಂಡು ಬ್ಯಾಂಕ್‌ನ ಉನ್ನತಿಗೆ ಶ್ರಮಿಸುತ್ತಿದ್ದೇವೆ. ಈ ರೀತಿ ಬ್ಯಾಂಕಿನ ಬಗ್ಗೆ ತಿಳಿವಳಿಕೆ ಉಳ್ಳವರು, ಜ್ಞಾನ ಉಳ್ಳವರನ್ನು ನಿರ್ದೇಶಕರಾಗಿ ಆಯ್ಕೆಯಾಗಿ ಬಂದರೆ ಅದು ಕೂಡ ಬೆಳೆಯುತ್ತದೆ ಎಂಬ ಆಶಯ ನಮ್ಮದು. ಇದರಿಂದ ರೈತರಿಗೂ ಹೆಚ್ಚು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಪಿಕೆಪಿಎಸ್‌ನ ಸದಸ್ಯರಿಗೆ ಮನವಿ ಮಾಡುವುದೊಂದೆ ನಮ್ಮ ಗುಂಪಿನ ಅಭ್ಯರ್ಥಿಯಾಗಿರುವ ಅಪ್ಪಾಸಾಹೇಬ ಕುಲಗೋಡೆ ಅವರಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಬ್ಯಾಂಕ್‌ ಗಟ್ಟಿಯಾದರೆ ರೈತರಿಗೆ ಒಳ್ಳೆಯದಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ತಂಡ ಅದರ ಏಳಿಗೆಗಾಗಿ ಶ್ರಮಿಸಲು ಸದಾ ಸಿದ್ಧವಾಗಿದೆ. ಈಗಿರುವ ಯೋಜನೆಗಳ ಜತೆ ಜತೆಗೆ ಇನ್ನೂ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಆಲೋಚನೆ ನಮ್ಮದಾಗಿದೆ ಎಂದ ಅವರು, ಈಗಾಗಲೇ ಸಾವಿರಾರು ಕೋಟಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿದ್ದೇವೆ. ಇನ್ನೂ ಹೆಚ್ಚಿನ ಸಾಲ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ನಮ್ಮ ತಂಡ ಸನ್ನದ್ಧವಾಗಿದೆ ಎಂದು ವಿವರಿಸಿದರು.

ಡಿಸಿಸಿ ಬ್ಯಾಂಕಿನ ಪ್ರಚಾರವನ್ನು ಖಾನಾಪುರದಿಂದ ಆರಂಭಿಸಲಾಯಿತು. ಅ.19ಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದರಿಂದ, ಆರಂಭದಲ್ಲೇ ಖಾನಾಪುರದಿಂದ ಪ್ರಚಾರ ಕೈಗೊಳ್ಳಲಾಯಿತು. ಈಗ ರಾಯಬಾಗದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಕಿತ್ತೂರು, ನಿಪ್ಪಾಣಿ, ಬೈಲಹೊಂಗಲದಲ್ಲಿ ಪ್ರಚಾರ ಮಾಡಿದರೆ 11 ತಾಲೂಕಿನಲ್ಲಿ ಪ್ರಚಾರ ಕಾರ್ಯ ಮುಗಿದಂತೆ ಆಗುತ್ತದೆ ಎಂದರು.

ಈ ವೇಳೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ,ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗೋಡೆ, ರಾಜೇಂದ್ರ ಅಂಕಲಗಿ, ಎಸ್.ಎಸ್.ಢವಣ, ಸಂಜೀವ ಬಾನೆ, ಅರ್ಜುನ ನಾಯಿಕವಾಡಿ ಸೇರಿದಂತೆ ಇತರರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ