Breaking News

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

Spread the love

ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸದಾನಂದನಗರದ ಎನ್‌ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್​​ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ.

ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ ಮಾಡಿದ್ದ ಸಂದೀಪ್ ಜಾಧವ್ ಎಂಬಾತ, ತಮ್ಮ ಆಧಾರ್ ನಂಬರ್‌ನಿಂದ ಜೆಟ್ ಏರ್‌ವೇಸ್ ಸಂಸ್ಥೆಯ ನರೇಶ್ ಗೋಯಲ್ ಎಂಬವರ ಹೆಸರಿಗೆ ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎಂದು ಬೆದರಿಸಿದ್ದಾನೆ. ಜುಲೈ 9ರಿಂದ ಜು.15ರವರೆಗೆ ಡಿಜಿಟಲ್ ಅರೆಸ್ಟ್ ಮಾಡಿದ್ದ ವಂಚಕ, ವಿಡಿಯೋ ಕರೆ ಮೂಲಕ ವಾಟ್ಸ್​ಆ್ಯಪ್​​ನಲ್ಲಿ ನಕಲಿ ಬಂಧನದ ವಾರಂಟ್ ತೋರಿಸಿ ಆತಂಕ ಹುಟ್ಟಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Spread the loveಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ