ಶಿವಮೊಗ್ಗ: ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ)ಯನ್ನು ಜಾರಿಗೊಳಿಸಿದೆ.
ಈ ಎಸ್ಒಪಿ ಕುರಿತು ಶಿವಮೊಗ್ಗದ ಡಿಡಿಪಿಐ ಮಂಜುನಾಥ್ ಅವರು ‘ಮಾಹಿತಿ ನೀಡಿದ್ದಾರೆ. ಹೊಸನಗರದ ಶಾಲೆಯೊಂದರಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಶಾಲೆಯಲ್ಲಿ ನೀರನ್ನು ಬಳಸುವಾಗ ಪ್ರಮಾಣಿತ ಕಾರ್ಯಾಚರಣಾ ವಿಧಾನ ಅನುಸರಿಸುವ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಸ್ಒಪಿಯಲ್ಲಿ ಪ್ರಮುಖ 9 ಅಂಶಗಳ ಬಗ್ಗೆ ಸೂಚನೆ ನೀಡಲಾಗಿದೆ. ಅದರ ಅನುಸಾರ ಬಿಸಿಯೂಟ, ಹಾಲು, ಮೊಟ್ಟೆ, ಬಾಳೆಹಣ್ಣು ವಿತರಣೆಯಲ್ಲಿ ಕ್ರಮಗಳನ್ನು ಅನುಸರಿಸಬೇಕು. ಈ ಬಗ್ಗೆ ಶಿಕ್ಷಕರು, ಅಡುಗೆ ತಯಾರಕರು ಹಾಗೂ ವಿದ್ಯಾರ್ಥಿಗಳಿಗೆ ಡಿಡಿಪಿಐ ಅವರು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಎಸ್ಒಪಿ ಕಳುಹಿಸಿಕೊಟ್ಟಿದ್ದಾರೆ.
Laxmi News 24×7