ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾಚೋಹಳ್ಳಿಯಲ್ಲಿ ನಡೆದಿದೆ. ವಿಜಯ್ ಕುಮಾರ್ (39) ಹತ್ಯೆಗೀಡಾದ ಉದ್ಯಮಿ ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ಈ ಘಟನೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕೆಲಸದ ನಿಮಿತ್ತವಾಗಿ ನಿನ್ನೆ ಸಂಜೆ ಮನೆಯಿಂದ ಹೊರಗೆ ಹೋದ ವಿಜಯ್ ಕುಮಾರ್, ಮಾಚೋಹಳ್ಳಿಯ ಡಿ-ಗ್ರೂಪ್ ಲೇಔಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೆಲಮಂಗಲ ಬಳಿಯ ಕಡಬಗೆರೆ ಕ್ರಾಸ್ನ ಜಯಪ್ರಿಯ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದ್ದು, ಯಾರೋ ದುಷ್ಕರ್ಮಿಗಳು ವಿಜಯ್ ಕುಮಾರ್ನ ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
Laxmi News 24×7