Breaking News

ಕರ್ನಾಟಕದಲ್ಲಿ ಹುಲಿ ಸಂತತಿ ಅಪಾಯದಲ್ಲಿ

Spread the love

ಬೆಂಗಳೂರು, ಆಗಸ್ಟ್​ 19: ಕರ್ನಾಟಕದಲ್ಲಿ (Karanataka) ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ (Tiger Reserve Forest). ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ (Tiger) ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಹುಲಿ ಸಂರಕ್ಷಿತ ಪ್ರದೇಶವಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ (2020 ರಿಂದ 2025) ರ ನಡುವೆ 75 ಹುಲಿಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.

ರ್ನಾಟಕದ ಎರಡು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆಯಲ್ಲಿ 26 ಮತ್ತು ಬಂಡೀಪುರದಲ್ಲಿ 22 ಹುಲಿಗಳು ಮೃತಪಟ್ಟಿವೆ. ಈ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ವರದಿಯಾದ ಎಲ್ಲ ಹುಲಿಗಳ ಸಾವಿನಲ್ಲಿ ಸುಮಾರು 3/2 ಭಾಗದಷ್ಟು ಹುಲಿಗಳು ಈ ಸಂರಕ್ಷಣಾ ಪ್ರದೇಶಗಳಲ್ಲಿ ಮೃತಪಟ್ಟಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​ ವರದಿ ಮಾಡಿದೆ. ಬಿಳಿಗಿರಿ ರಂಗನಾಥ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ (ಎಂಎಂ) ಬೆಟ್ಟಗಳಂತಹ ಸಂರಕ್ಷಿತ ಪ್ರದೇಶಗಳಲ್ಲಿ ಕ್ರಮವಾಗಿ ಎಂಟು ಮತ್ತು ಐದು ಹುಲಿಗಳು ಸಾವನ್ನಪ್ಪಿವೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಮಾತನಾಡಿ, 75 ರಲ್ಲಿ 62 ಹುಲಿಗಳು ನೈಸರ್ಗಿಕವಾಗಿ ಮೃತಪಟ್ಟಿವೆ. ಅಂದರೆ, ವಯೋಸಹಜ ಕಾಯಿಲೆ, ಹುಲಿಗಳ ನಡುವಿನ ಸಂಘರ್ಷ ಮತ್ತು ರೋಗಗಳಿಗೆ ತುತ್ತಾಗಿವೆ ಮೃತಪಟ್ಟಿವೆ ಎಂದು ಹೇಳಿದರು. ಇನ್ನುಳಿದ 13 ಹುಲಿಗಳು ಅಸ್ವಾಭಾವಿಕವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ