Breaking News

ಖೈದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ

Spread the love

ಬೆಂಗಳೂರು, ಆಗಸ್ಟ್​ 24: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ (Bengaluru Central Jail) ಭರತ್ ಮತ್ತು ಈತನ ಗ್ಯಾಂಗ್​​​ ಖೈದಿ ಅನಿಲ್​​​ ಕುಮಾರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದೆ.

ಆಗಸ್ಟ್​ 2ರ ಮಧ್ಯಾಹ್ನ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್​​​ ಕುಮಾರ್​ ಪ್ರಕರಣವೊಂದರ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್​ ಕೊಠಡಿಗೆ ತೆರಳುತ್ತಿದ್ದರು. ಈ ವೇಳೆ ಭರತ್ ಮತ್ತು ಈತನ ಗ್ಯಾಂಗ್​​​

ಕ್ವಾರಂಟೈನ್​​ ಜೈಲಿನ ಬ್ಯಾರಕ್​​-2ರ ಹಿಂಭಾಗದ ಕೊಠಡಿ 6ರಲ್ಲಿ ನಮ್ಮನ್ನು ನೋಡಿ ಉಗಿತಿಯಾ ಅಂತ ಮಾರಕ ಆಯುಧದಿಂದ ಅನಿಲ್​ ಕುಮಾರ್ ಮೇಲೆ ಹಲ್ಲೆ ಮಾಡಿದೆ.ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಖೈದಿ ಅನಿಲ್​ ಕುಮಾರ್ ಅವರನ್ನು ಪರಪ್ಪನ ಅಗ್ರಹಾರ ಜೈಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಭರತ್

ಮತ್ತು ಗ್ಯಾಂಗ್​ ಸೇರಿದಂತೆ 8 ಮಂದಿ ವಿರುದ್ಧ ಬಿಎನ್​ಎಸ್​​ ಸೆಕ್ಷನ್​ 118(1), 3(5)ಅಡಿಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈದಿ ಅನೀಲ್​ ಕುಮಾರ್ ಕೊಲೆ ಪ್ರಕರಣದಲ್ಲಿ 2023ರಲ್ಲಿ ಜೈಲು ಸೇರಿದ್ದಾನೆ. ಭರತ್​ ಮತ್ತು ಈತನ ಗ್ಯಾಂಗ್​ 2025ರಲ್ಲಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ