ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಾಹಸಮಯ ಜೀವನ ಮತ್ತು ತ್ಯಾಗವನ್ನು ಸ್ಮರಿಸಿ, ಹೊನಕುಪ್ಪಿ ಹಾಗೂ ಸಿದ್ದಾಮರಹಳ್ಳಿ ಗ್ರಾಮದ ಸಮಸ್ತ ನಾಗರಿಕರ ಧನಸಹಾಯದಿಂದ ಈ ಮೂರ್ತಿ ಪ್ರತಿಷ್ಠಾಪನೆಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು, ಪರಮ ಪೂಜ್ಯ ಶ್ರೀ ಬಿಳಿಯಾನಸಿದ್ದ ಸ್ವಾಮೀಜಿ ಶ್ರೀ ಯೋಗಿಸಿದ್ದೇಶ್ವರ ಆಶ್ರಮ, ಸುಕ್ಷೇತ್ರ ಜೋಕಾನ ಅವರು ಹಾಗೂ ಪರಮ ಪೂಜ್ಯ ಶ್ರೀ ವಿಳ್ಳಲದೇವಋಷಿ ಶ್ರೀ ವಿದ್ಧಲ ಬೀರದೇವರ ದೇವಸ್ಥಾನ, ಕೌಜಲಗಿ ಇವರು ವಹಿಸಿದ್ದರು.
ಈ ವೇಳೆ ಸಹೋದರ ಹಾಗೂ ಮುಖಂಡರಾದ ಶ್ರೀ ಸರ್ವೋತ್ತಮ ಜಾರಕಿಹೊಳಿ, ಕಮಿಟಿಯ ಅಧ್ಯಕ್ಷರಾದ ಡಾ. ಹಣಮಂತ ಭೀ. ಸಿದ್ದಾಪೂರ, ಕಮಿಟಿಯ ಉಪಾಧ್ಯಕ್ಷರಾದ ಶ್ರೀ ಕೃಷ್ಣಾ ಯ. ಸೂರನ್ನವರ, ಮುಖಂಡರಾದ ಶ್ರೀ ಪ್ರಕಾಶ ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Laxmi News 24×7