ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್ ಅವರಿಂದ ಶೋಭೆಯ ಸಂದೇಶ
ಮೈಸೂರು: ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯ ಗೌರವ ತಂದುಕೊಟ್ಟ ಹೆಮ್ಮೆಯ ಕನ್ನಡತಿ ಶ್ರೀಮತಿ ಬಾನು ಮುಷ್ತಾಕ್ ಅವರು ಈ ಬಾರಿಯ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹವಾದ ಸಂಗತಿ.
ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿಪತಾಕೆಯನ್ನು ಎತ್ತಿಹಿಡಿದ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವ ಸರ್ಕಾರದ ನಿರ್ಧಾರವನ್ನು ನಾವು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ.
ನಾಡಿನ ಸಮಸ್ತ ಮಹಿಳೆಯರ ಪ್ರತಿನಿಧಿಯಾಗಿ ಬಾನು ಮುಷ್ತಾಕ್ ಅವರು ಈ ಮಹೋತ್ಸವದಲ್ಲಿ ಭಾಗವಹಿಸುತ್ತಿರುವುದು ಕನ್ನಡಿಗರ ಹೆಮ್ಮೆ ಹೆಚ್ಚಿಸುವುದು ಖಚಿತ.
Laxmi News 24×7