Breaking News

ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಂದ ಸೊಸೆ; ಆರೋಪಿಗಳ ಬಂಧನ

Spread the love

ಚಿಕ್ಕಮಗಳೂರು: ಒಳಸಂಚು ರೂಪಿಸಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿ ಚಿನ್ನಾಭರಣ, ಹಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೆ ಹಾಗೂ ಇನ್ನೊಬ್ಬ ಆರೋಪಿಯನ್ನು ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಮಾತನಾಡಿದ್ದು, ಆ. 20 ರಂದು ದಾವಣಗೆರೆ ಡಾಲರ್ಸ್ ಕಾಲೋನಿ ನಿವಾಸಿ ಶ್ರೀಮತಿ ವೀಣಾ ರಾಮ ಚಂದ್ರಪ್ಪ ಎಂಬುವರು ಠಾಣೆಗೆ ಹಾಜರಾಗಿ ತನ್ನ ಅತ್ತಿಗೆ ಅಶ್ವಿನಿ ಅವರು ಸ್ನೇಹಿತ ಆಂಜನೇಯನ ಜೊತೆ ಸೇರಿ ಮನೆಯಲ್ಲಿದ್ದ 20 ಲಕ್ಷ ರೂಪಾಯಿ ಬೆಲೆ ಬಾಳುವ ಬಂಗಾರದ ಆಭರಣ ಮತ್ತು 65,000 ರೂ. ನಗದು ಕಳವು ಮಾಡಿದ್ದಾರೆ ಎಂದು ದೂರು ನೀಡಿದ್ದರು ಎಂದು ತಿಳಿಸಿದರು.

ಅಲ್ಲದೆ, ತಾಯಿ ಶ್ರೀಮತಿ ದೇವಿರಮ್ಮನವರ ಗಮನಕ್ಕೆ ಬಾರದ ರೀತಿಯಲ್ಲಿ 10/08/2025 ರಂದು ರಾತ್ರಿ ಊಟದಲ್ಲಿ 20 ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಾರೆ. ಅದನ್ನು ದೇವಿರಮ್ಮ ಊಟ ಮಾಡಿದ ನಂತರ ಸುಸ್ತಾದರೂ ಸಾಯಿಸುವ ಉದ್ದೇಶದಿಂದಲೇ ಆಸ್ಪತ್ರೆಗೆ ಹೋಗಲು ತಡ ಮಾಡಿ ಸಕಾಲದಲ್ಲಿ ಚಿಕಿತ್ಸೆ ಕೊಡಿಸದಿದ್ದರಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು ಎಂದು ಮಾಹಿತಿ ನೀಡಿದರು.

ಈ ವಿಷಯ ಮರೆಮಾಚಿ ತಾಯಿಯ ಮರಣದ ಕಾರಣವನ್ನು ಯಾರಿಗೂ ಗೊತ್ತಾಗದಂತೆ ಸಂಬಂಧಿಕರು ಗ್ರಾಮಸ್ಥರ ಸಮ್ಮುಖದಲ್ಲಿ ಶವ ಸಂಸ್ಕಾರ ಮಾಡಿಸಿದರು ಎಂದು ಅಜ್ಜಂಪುರ ಪೊಲೀಸ್ ಠಾಣೆಗೆ ನೀಡಿದ ದೂರನ್ನು ಆಧರಿಸಿ ತನಿಖೆ ಕೈಗೊಳ್ಳಲಾಗಿತ್ತು ಎಂದು ಎಸ್​ಪಿ ತಿಳಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ