ಹುಕ್ಕೇರಿ ಪಟ್ಟಣದಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಗಳನ್ನು ವಿತರಿಸಲಾಯಿತು.
ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸತೀಶ ಜಾರಕಿಹೊಳಿ ಫೌಂಡೇಶನ್ನ ಸಮಾಜಮುಖಿ ಕಾರ್ಯಗಳಲ್ಲಿ ಇದು ಮತ್ತೊಂದು ಹೆಜ್ಜೆ.
ಮುಂದೆಯೂ ಅಗತ್ಯವಿರುವ ಜನರಿಗೆ ಸಹಾಯ ಮಾಡಿ, ಸತೀಶ ಜಾರಕಿಹೊಳಿಯವರ ಆಶಯದಂತೆ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲಾಗುವುದು.
ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
Laxmi News 24×7