ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ ನಡೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೇವಸ್ಥಾನದ ದಾನಪೆಟ್ಟಿಗೆ ಒಡೆದು ನಗದು ಹಣ ಹಾಗೂ ದೇವಿಯ ಆಭರಣಗಳನ್ನು ಅಪರಿಚಿತ ಕಳ್ಳರು ಕದಿಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮಾಹಿತಿಯ ಪ್ರಕಾರ, ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಈ ಕಳ್ಳತನ ನಡೆದಿದೆ. ದೇವಸ್ಥಾನ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರು ಸ್ಪಷ್ಟವಾಗಿ ಸೆರೆಯಾಗಿದ್ದಾರೆ. ಬೆಳಿಗ್ಗೆ ಘಟನೆ ಬಹಿರಂಗವಾದ ನಂತರ ಗ್ರಾಮದಲ್ಲಿ ಆತಂಕ ಹಾಗೂ ಚರ್ಚೆಗೆ ತುತ್ತಾಗಿದೆ. ದೇವಸ್ಥಾನದ ಮುಂದೆ ಗ್ರಾಮಸ್ಥರ ದೊಡ್ಡ ಪ್ರಮಾಣದ ಗುಂಪು ಕೂಡಿದ್ದು, ಈ ಕುರಿತು ಖಳಬಳ ಉಂಟಾಗಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸದಲಗಾ ಪೋಲಿಸರಿಗೆ ತಿಳಿಸಲಾಯಿತು. ನಂತರ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪಂಚನಾಮೆ ಮಾಡಿದ್ದಾರೆ. ಕಳ್ಳರನ್ನು ಪತ್ತೆಹಚ್ಚುವ ದೃಷ್ಟಿಯಿಂದ ಪೋಲಿಸ್ ಪಟಕ ತನಿಖೆಯನ್ನು ಆರಂಭಿಸಿದೆ.
ಇತ್ತೀಚೆಗೆ ಮಲಿಕವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.